ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.13
ಚಿತ್ರದುರ್ಗ ತಾಲ್ಲೂಕಿನ ಹಳೇ ರಂಗಾಪುರ ಗ್ರಾಮದಲ್ಲಿ ಇದೇ ಜನವರಿ 21ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮವಾಸ್ತವ್ಯ ಹೂಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಹಿರಿಯೂರು ತಾಲ್ಲೂಕಿನ ಶಿಡ್ಲಯ್ಯನಕೋಟೆ, ಚಳ್ಳಕೆರೆ ತಾಲ್ಲೂಕಿನ ಚನ್ನಮ್ಮನಾಗ್ತೀಹಳ್ಳಿ, ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿ, ಹೊಳಲ್ಕೆರೆ ತಾಲ್ಲೂಕಿನ ಗುಡ್ಡದ ಸಾಂತೇನಹಳ್ಳಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನ ರಾಜಾಪುರ ಗ್ರಾಮದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ
[t4b-ticker]
+ There are no comments
Add yours