ನಮ್ಮಲ್ಲಿ ಪ್ರಧಾನಿಗೂ ಟಿಕೆಟ್ ನೀಡುವುದು ಪಾರ್ಲಿಮೆಂಟರಿ ಬೋರ್ಡ್: ಸಿ.ಟಿ.ರವಿ ಕೊಟ್ಟರಾ ಮಾಜಿ ಸಿಎಂ ಗೆ ಟಾಂಗ್

 

 

 

 

ರಾಜ್ಯ ಸುದ್ದಿ: state news News19kannada Desk

ರಾಜ್ಯ ರಾಜಕಾರಣದ ಮಾಜಿ ಸಿಎಂ  ಯಡಿಯೂರಪ್ಪ ರಾಜಕೀಯ ನಿರ್ಧಾರಕ್ಕೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸಿ.ಟಿ.ರವಿ ಮಾತನಾಡಿ ಯಡಿಯೂರಪ್ಪ  ಮಗನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಟ್ಟಿದ್ದಾರೆ ಆದರೆ ಪಕ್ಷ ನಿರ್ಧರಿಸುತ್ತದೆ.

ಮಾಜಿ ಸಿಎಂ ಯಡಿಯೂರಪ್ಪ ಅವರು ಮಾಸ್ ಲೀಡರ್. ಪಕ್ಷ ಕಟ್ಟಿದವರಲ್ಲಿ ಅವರು ಕೂಡ ಒಬ್ಬರು. ನಮ್ಮಲ್ಲಿ ಪ್ರಧಾನಿಗೂ ಟಿಕೆಟ್ ಘೋಷಣೆ ಮಾಡುವುದು ಪಾರ್ಲಿಮೆಂಟರಿ ಬೋರ್ಡ್. ಯಾರಿಗೆ, ಎಲ್ಲಿ ಟಿಕೆಟ್ ಕೊಡಬೇಕು, ಕೊಡಬಾರದು ಎಂಬುದನ್ನು ಪಾರ್ಲಿಮೆಂಟರಿ ಬೋರ್ಡ್ ನಿರ್ಧರಿಸುತ್ತದೆ ಎಂದಿದ್ದಾರೆ.

ಯಡಿಯೂರಪ್ಪ ಅವರು ಚುನಾವಣೆಗೆ ಇನ್ಮುಂದೆ ನಿಲ್ಲಲ್ಲ ಎಂದಿದ್ದಾರೆ ವಿನಃ, ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಾಗಿ ಹೇಳಿಲ್ಲ. ನಮ್ಮ ಪಕ್ಷದ ವ್ಯವಸ್ಥೆ ಹೇಗಿದೆ ಎಂಬುದು ಹಿರಿಯ ನಾಯಕರಾಗಿರುವ ಯಡಿಯೂರಪ್ಪ ಅವರಿಗೆ ಚೆನ್ನಾಗಿಯೇ ಗೊತ್ತಿದೆ. ಅವರು ಕೇವಲ ಸಲಹೆ ನೀಡಿದ್ದಾರೆ. ಆ ಸಲಹೆಯನ್ನು ಪಕ್ಷ ಕೂಡ ಗಂಭೀರವಾಗಿ ಪರಿಗಣಿಸುತ್ತದೆ. ಇಲ್ಲಿ ಯಾವುದೇ ಗೊಂದಲವಿಲ್ಲ ಎಂದಿದ್ದಾರೆ.

[t4b-ticker]

You May Also Like

More From Author

+ There are no comments

Add yours