ಪ್ರಥಮ ಪಿಯುಸಿ ವಿಜ್ಞಾನ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ

 

 

 

 

ಚಿತ್ರದುರ್ಗ,ಆ.24:2020-21ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯ ಮೊರಾರ್ಜಿ ದೇಸಾಯಿ, ಏಕಲವ್ಯ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು  ಆಗಸ್ಟ್ 25 ರವರೆಗೆ ವಿಸ್ತರಿಸಲಾಗಿದೆ.ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿತ್ರದುರ್ಗ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು (ಪ.ಜಾತಿ), ಹೊಳಲ್ಕೆರೆ ತಾಲ್ಲೂಕಿನ ಬೊಮ್ಮನಕಟ್ಟೆ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು (ಪ.ವರ್ಗ) ಹಾಗೂ ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಏಕಲವ್ಯ ಮಾದರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು(ಪ.ವರ್ಗ) ಇಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ಪಿಯುಸಿಯ ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಚಿತ್ರದುರ್ಗದ ಮೊರಾರ್ಜಿ ದೇಸಾಯಿ ವಸತಿಯುತ ವಿಜ್ಞಾನ ಪದವಿ ಪೂರ್ವ ಕಾಲೇಜು ಅಥವಾ ಜಿಲ್ಲೆಯ ಯಾವುದೇ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಆಗಸ್ಟ್ 25 ರೊಳಗಾಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಸಿದ್ದರಾಮೇಶ್ವರ ಮಹಾಸಂಸ್ಥಾನ ಮಠ, ಇಮ್ಮಡಿಗಿರಿ ನಗರ, ಎನ್.ಎಚ್-4 ಚಿತ್ರದುರ್ಗ  ಇಲ್ಲಿಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.======

 

 

[t4b-ticker]

You May Also Like

More From Author

+ There are no comments

Add yours