ಫೀಜಿಯೋಥೆರಪಿಸ್ಟ್ ತಾತ್ಕಾಲಿಕ ನೇಮಕಾತಿ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 18:
ಸಮನ್ವಯ ಶಿಕ್ಷಣ ಯೋಜನೆಯಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 53 ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ಫೀಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 22 ಅರ್ಜಿ ಸಲ್ಲಿಸಲು ಕೊನೆಯ  ದಿನವಾಗಿದೆ.
ಡಿ.ಪಿ.ಟಿ. ಮತ್ತು ಬಿ.ಪಿ.ಟಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು  ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ಅರ್ಹತೆ ಹೊಂದಿರುವ ಬಗ್ಗೆ ಸಂಪೂರ್ಣವಾದ ಮಾಹಿತಿಯೊಂದಿಗೆ  ಚಿತ್ರದುರ್ಗದ  ಬಿ.ಡಿ.ರಸ್ತೆಯ ಹಳೇ ಮಾಧ್ಯಮಿಕ ಶಾಲಾ ಆವರಣದ ಬಿ.ಆರ್.ಸಿ. ಕಛೇರಿಗೆ ಅರ್ಜಿ ಸಲ್ಲಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ರದುರ್ಗ ಕ್ಷೇತ್ರ     ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ

 

 

[t4b-ticker]

You May Also Like

More From Author

+ There are no comments

Add yours