ಎಂಪಿ ಚುನಾವಣೆ ಗೆಲುವಿಗೆ ಶ್ರಮಿಸಲು ಸಿದ್ದರಾಗಿ: ಟಿ.ರಘುಮೂರ್ತಿ

 

ಶಾಸಕರ ಭವನದಲ್ಲಿ ಹೊಸವರ್ಷದ ಸಂಭ್ರಮ

ಲೋಕಸಭಾ ಚುನಾವಣೆ ಗೆಲುವಿಗೆ ಎಲ್ಲಾರೂ ಸಂಕಲ್ಪ ಮಾಡಿ : ಶಾಸಕ ರಘುಮೂರ್ತಿ ಕರೆ

ನ್ಯೂಸ್ 19 ಕನ್ನಡ ಡೆಸ್ಕ್

ಚಳ್ಳಕೆರೆ: ಕಳೆದ ೧೧ ವರ್ಷಗಳಿಂದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಭಾಗದ ಜನರ ಸಂಕಷ್ಟಗಳಿಗೆ ನೆರವಾಗುವ ಅವಕಾಶವನ್ನು ಭಗವಂತ ಮಾಡಿಕೊಟ್ಟಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನಸೇವೆ ಹಾಗೂ ಅಭಿವೃದ್ದಿಯಲ್ಲಿ ತೊಡಗಲು ಹೊಸವರ್ಷದ ದಿನ ಸಂಕಲ್ಪ ಮಾಡಿರುವುದಾಗಿ ಕ್ಷೇತ್ರದ ಶಾಸಕ ‌(MLA)ಟಿ.ರಘುಮೂರ್ತಿ ತಿಳಿಸಿದರು.

ಅವರು, ಮಂಗಳವಾರ ಶಾಸಕರ ಭವನದಲ್ಲಿ ಚಳ್ಳಕೆರೆ ಮತ್ತು ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಹೊಸವರ್ಷ-೨೦೨೪ರ ಸಂಭ್ರಮವನ್ನು ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಿದಲ್ಲದೆ, ಪಕ್ಷದ ಕಾರ್ಯಕರ್ತರು, ಮುಖಂಡರು ಸಹ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಸಂಕಲ್ಪ ಮಾಡಿ ಎಂದರು. ೨೦೨೩ರಲ್ಲಿ ಕರ್ನಾಟಕ ರಾಜ್ಯದ ಜನತೆ ೧೩೫ ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರ ನೀಡಿರುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಸಂದರ್ಭದಲ್ಲಿ ನೀಡಿದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ಸರ್ಕಾರ ಸಫಲವಾಗಿದೆ. ಪ್ರಸ್ತುತ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದರು.

ಇದನ್ನೂ ಓದಿ: ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪಕ್ಷದ ಹಿರಿಯ ಮುಖಂಡ ಟಿ.ಪ್ರಭುದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಪಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮಿನಿ ಸದಸ್ಯ ಓ.ರಂಗಸ್ವಾಮಿ, ಪಕ್ಷದ ಹಿರಿಯ ಮುಖಂಡ ಸಿ.ಟಿ.ಶ್ರೀನಿವಾಸ್, ಬಿ.ವಿ.ಸಿರಿಯಣ್ಣ, ಬಡಗಿಪಾಪಣ್ಣ, ಎನ್.ಮಂಜುನಾಥ, ಚೇತನ್‌ಕುಮಾರ್, ಪಾಲಯ್ಯ, ನಾಗರಾಜು, ರುದ್ರಮುನಿ, ನೇತಾಜಿಪ್ರಸನ್ನ, ಆರ್.ಪ್ರಸನ್ನಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾಬಾಯಿ, ಭಾಗ್ಯಮ್ಮ, ರಾಜೇಶ್ವರಿ, ಉಷಾ, ಸರಸ್ವತಿ ಮುಂತಾದವರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours