ಖ್ಯಾತ ನಟ ನಂದಮೂರಿ ತಾರಕರತ್ನ ಇನ್ನಿಲ್ಲ

 

ಬೆಂಗಳೂರು: ತೆಲುಗಿನ ಖ್ಯಾತ ನಟ, ಜೂನಿಯರ್‌ ಎನ್‌ಟಿಆರ್‌ ಅವರ ಸಂಬಂಧಿ ನಂದಮೂರಿ ತಾರಕರತ್ನ (೩೯) ಅವರು (Nandamuri Taraka Ratna) ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ.

ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರಿಗೆ ಕಳೆದ ೨೩ ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ನಟನಾಗಿ, ರಾಜಕಾರಣಿಯಾಗಿ ನಂದಮೂರಿ ತಾರಕರತ್ನ ಅವರು ಛಾಪು ಮೂಡಿ ಮೂಡಿಸಿದ್ದರು. ಆಂಧ್ರಪ್ರದೇಶದ ಕುಪ್ಪಂನಲ್ಲಿ ಜನವರಿ ೨೭ರಂದು ಟಿಡಿಪಿ ಪಾದಯಾತ್ರೆ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ಮೊದಲಿಗೆ ಅವರನ್ನು ಕುಪ್ಪಂನಲ್ಲಿರುವ ಪಿಇಎಸ್‌ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಉನ್ನತ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ೨೩ ದಿನಗಳಿಂದ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದರು. ಆಂಜಿಯೋಗ್ರಾಂ ಮೂಲಕ ಅವರಿಗೆ ಸ್ಟೆಂಟ್‌ ಅಳವಡಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ದಿನೇದಿನೆ ಹದಗೆಡುತ್ತಿದ್ದ ಕಾರಣ ಕೆಲ ದಿನಗಳ ಹಿಂದೆ ಜೂನಿಯರ್‌ ಎನ್‌ಟಿಆರ್‌, ನಟ ಬಾಲಕೃಷ್ಣ, ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಸೇರಿ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದರು.

[t4b-ticker]

You May Also Like

More From Author

+ There are no comments

Add yours