ಬೆಂಗಳೂರು : ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳನ್ನು 90 ದಿನಗಳಲ್ಲಿ ಇತ್ಯಂರ್ಥಪಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡರು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ಜನರಿಗೆ ಆಗುತ್ತಿರುವ ತೊಂದರೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು.
ಈ ನಿಟ್ಟಿನಲ್ಲಿ ಪ್ರತಿ ತಿಂಗಳು ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇಲಾಖೆಯಲ್ಲಿ ಈಗಲೂ ಹಳೆಯ ಪದ್ಧತಿ ಅನುಸರಿಸಲಾಗುತ್ತಿದೆ. ಇದರಿಂದಾಗಿ ಲಕ್ಷಗಟ್ಟಲೆ ಪ್ರಕರಣಗಳು ಬಾಕಿ ಇದ್ದು, ಕಂದಾಯ ಇಲಾಖೆ ಇಡೀ ವ್ಯವಸ್ಥೆಗೆ ಕೊಂಡಿಯಾಗಿದ್ದು, ಇದನ್ನು ಸರಳೀಕರಣಗೊಳಿಸಿ ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸಲಾಗುವುದು ಎಂದು ತಿಳಿಸಿದ್ದಾರೆ.
[t4b-ticker]
+ There are no comments
Add yours