ಎಸ್.ಲಿಂಗಮೂರ್ತಿಗೆ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನ

 

ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಚಾಲಕರಾಗಿ ನೇಮಕಗೊಂಡಿರುವ ಎಸ್.ಲಿಂಗಮೂರ್ತಿ ಸೋಮವಾರ ಬಿಜೆಪಿ. ಪಕ್ಷದ ಕಚೇರಿಗೆ ಭೇಟಿ ನೀಡಿದಾಗ ಜಿಲ್ಲಾಧ್ಯಕ್ಷ ಎ.ಮುರಳಿ ಶಾಲು ಹೊದಿಸಿ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ಲಿಂಗಮೂರ್ತಿ ಸದ್ಯದಲ್ಲೆ ಎದುರಾಗಲಿರುವ ಪಾರ್ಲಿಮೆಂಟ್ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಈಗಿನಿಂದಲೆ ತಯಾರಾಗಿ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು. ದೇಶದಲ್ಲಿ ಬಿಜೆಪಿ. ವಾತಾವರಣವಿರುವುದರಿಂದ ಪ್ರಧಾನಿ ಮೋದಿರವರು ನೀಡಿರುವ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದರು.

ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ಉದ್ಗಾಟಿಸಿರುವ ಪ್ರಧಾನಿ ಮೋದಿ ಹಿಂದೂಗಳ ಐದು ನೂರು ವರ್ಷಗಳ ಕನಸನ್ನು ನನಸು ಮಾಡಿ ಇಡಿ ಪ್ರಪಂಚವೆ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಹಾಗಾಗಿ 2024 ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರಮೋದಿ ಮತ್ತೆ ಪ್ರಧಾನಿಯಾಗಬೇಕಾಗಿರುವುದರಿಂದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಟೊಂಕ ಕಟ್ಟಿ ನಿಲ್ಲಬೇಕು ಎಂದು ತಾಕೀತು ಮಾಡಿದರು.

ಇದನ್ನೂ ಓದಿ:ನಿಗಮ-ಮಂಡಳಿ ಅಧಿಕಾರ 2 ವರ್ಷ ಮಾತ್ರ ಏಕೆ?
ಡಾ.ಸಿದ್ದಾರ್ಥ ಗುಂಡಾರ್ಪಿ, ನರೇಂದ್ರ ಹೊನ್ನಾಳ್, ಶಿವಣ್ಣ, ಸುರೇಶ್‍ಸಿದ್ದಾಪುರ, ಜಿಲ್ಲೆಯ ಎಲ್ಲಾ ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours