ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.01:
ಮಾರ್ಚ್ 01 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದ ಪರೀಕ್ಷೆಗೆ 564 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಕನ್ನಡ ವಿಷಯದಲ್ಲಿ 13840 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 13276 ಹಾಜರಾಗಿ, 564 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಇದನ್ನೂ ಓದಿ: ಬಿಜೆಪಿ ಮುಖಂಡ ನಟ ಕೆ.ಶಿವರಾಮ್ ಇನ್ನಿಲ್ಲ
ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ಇರುವುದಿಲ್ಲ. ಮಾರ್ಚ್ 02 ಮತ್ತು 03ರಂದು ಯಾವುದೇ ಪರೀಕ್ಷೆ ಇರುವುದಿಲ್ಲ. ಮಾರ್ಚ್ 04ರಂದು ಗಣಿತ ಮತ್ತು ಶಿಕ್ಷಣ ಶಾಸ್ತ್ರ ವಿಷಯದ ಪರೀಕ್ಷೆ ಇರುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶರು ತಿಳಿಸಿದ್ದಾರೆ
[t4b-ticker]
+ There are no comments
Add yours