ಸಿದ್ದರಾಮಯ್ಯಗೆ ಹೊಸ ಕ್ಷೇತ್ರದಿಂದ ಸ್ಪರ್ಧೆ ಡಿಮ್ಯಾಂಡ್

 

ಬೆಂಗಳೂರು:  2023ರ ವಿಧಾನಸಭೆ ಚುನಾವಣೆಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಕಿಸಾನ್ ಘಟಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿದೆ.

ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಘಟಕದ ಅಧ್ಯಕ್ಷ ಸಚಿನ್ ಮೀಗಾ ತಮಗೆ ಶುಭಾಶಯಗಳನ್ನು ಕೋರುವುದರ ಜೊತೆಗೆ ನಿಮ್ಮ ಜನ್ಮದಿನದ ಸಂದರ್ಭದಲ್ಲಿ ತಾವು 2023ರ ವಿಧಾನಸಭೆ ಚುನಾವಣೆಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕೋರಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರ ವರ್ತನೆಯಿಂದ ಬೇಸತ್ತಿದ್ದಾರೆ. ನಿಮ್ಮಂತಹ ಜನನಾಯಕರು ದಿವಂಗತ ಇಂದಿರಾ ಗಾಂಧಿ ಅವರಿಗೆ ಪುನರ್ಜನ್ಮ ನೀಡಿದ ಕ್ಷೇತ್ರದಿಂದ ಸ್ಪರ್ಧಿಸಿ, ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಮ್ಮ ಗೆಲುವಿನಿಂದ ಪುನರ್ಜನ್ಮವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

[t4b-ticker]

You May Also Like

More From Author

+ There are no comments

Add yours