ವಿಶೇಷಚೇತನರು ಸಾಮಥ್ಯಕ್ಕನುಗುಣವಾಗಿ ದಿಟ್ಟ ಹೆಜ್ಜೆ ಇಡಿ:ಎಂ.ಕಾರ್ತೀಕ್

 

ಚಿತ್ರದುರ್ಗ:ವಿಶೇಷಚೇತನರು ಮುಖ್ಯವಾಗಿ ತಮ್ಮ ಸಾಮಥ್ರ್ಯದ ಮೇಲೆ ನಂಬಿಕೆ ಇಡಬೇಕು. ತಮ್ಮ ಸಾಮಥ್ಯಕ್ಕನುಗುಣವಾಗಿ ಪ್ರಯತ್ನ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತೀಕ್ ಸಲಹೆ ನೀಡಿದರು.
ನಗರದ ತರಾಸು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,(World Day of Persons with Disabilities)
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು, ಗ್ರಾಮೀಣ ಪುನರ್ವಸತಿ ಯೋಜನೆಯ ಕಾರ್ಯಕರ್ತರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಚೇತನರು ತಮ್ಮ ಹಕ್ಕುಗಳು, ಅವಕಾಶಗಳನ್ನು ಅರ್ಥಮಾಡಿಕೊಂಡು, ಬಳಸಿಕೊಂಡು ತಾವು ಸಾಮಾನ್ಯರಂತೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ವಿಕಲಚೇತನರ ದಿನ ಆಚರಣೆ ಮಾಡಲಾಗುತ್ತಿದೆ. ವಿಕಲಚೇತನರು ತಮ್ಮ ಸಾಮಾಥ್ರ್ಯದ ಮೇಲೆ ನಂಬಿಕೆ ಇಟ್ಟುಕೊಂಡಾಗ ಮಾತ್ರ ದಿಟ್ಟ ಹೆಜ್ಜೆಗಳನ್ನಿಡಲು ಸಾಧ್ಯವಾಗಲಿದೆ ಎಂದು ಹೇಳಿದರು.
ವಿಕಲಚೇತನರ ಕಲ್ಯಾಣಕ್ಕಾಗಿ ಪ್ರತ್ಯೇಕವಾಗಿ ಇಲಾಖೆಯನ್ನು ಸ್ಥಾಪಿಸಲಾಗಿದ್ದು, ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.  “ವಿಕಲಚೇತನರಿಗಾಗಿ ವಿಕಲಚೇತನರೊಂದಿಗೆ ವಿಕಲಚೇತನರಿಂದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಂರಕ್ಷಿಸಲು ಮತ್ತು ಸಾಧಿಸಲು ಕಾರ್ಯ ಪ್ರವೃತ್ತರಾಗುವಿಕೆಯಲ್ಲಿ ಒಗ್ಗಟ್ಟು” ಎಂಬುವುದು ಈ ಬಾರಿಯ ವಿಶ್ವ ವಿಕಲಚೇತನರ ಘೋಷವಾಕ್ಯವಾಗಿದ್ದು, ಪ್ರತಿಯೊಬ್ಬರಿಗೂ ಸಮಾಜದಲ್ಲಿ ಸಮಾನವಾದ ಹಕ್ಕು ಇದೆ ಎಂದು ಹೇಳಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಂ.ವಿ.ವೀಣಾ ಮಾತನಾಡಿ, 2011ರ ಜನಗಣತಿ ಪ್ರಕಾರ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 35,971 ಜನ ವಿಕಲಚೇತನರು ಇದ್ದಾರೆ. ವಿಕಲಚೇತನರು ಮುಖ್ಯವಾಹಿನಿಗೆ ತರಲು, ಸಾಮಾನ್ಯರಂತೆ ಜೀವಿಸಲು ಅನುಕೂಲವಾಗುವಂತೆ ಎಲ್ಲಾ ರೀತಿಯ ಅಡೆತಡೆರಹಿತ ಸೌಲಭ್ಯ, ನೆರವು ನೀಡುವುದು ಸರ್ಕಾರದ ಹಾಗೂ ಸಮುದಾಯದ ಜವಾಬ್ದಾರಿ ಎಂದರು.
ವಿಕಲಚೇತನರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಸೌಲಭ್ಯಗಳನ್ನು ಒದಗಿಸಿ ಎಲ್ಲಾ ವಿಕಲಚೇತನರು ಮುಖ್ಯವಾಹಿನಿಗೆ ಬರುವಲ್ಲಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.  ವಿಕಲಚೇತನರಿಗೆ ಮಾಸಿಕ ನಿರ್ವಾಹಣಾ ಭತ್ಯೆ, ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಸಾಧನ ಸಲಕರಣೆ ಯೋಜನೆ, ಆಧಾರ ಯೋಜನೆ, ವಿಕಲಚೇತನ ವ್ಯಕ್ತಿಯನ್ನು ಸಾಮಾನ್ಯ ವ್ಯಕ್ತಿ ವಿವಾಹವಾದಲ್ಲಿ ಪ್ರೋತ್ಸಾಹ ಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ಮಹಿಳೆಯರಿಗೆ ಜನಿಸುವ ಮಕ್ಕಳಿಗೆ ಶಿಶುಪಾಲನಾ ಭತ್ಯೆ, ತೀವ್ರತರನಾದ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಎಸ್.ಎಸ್.ಎಲ್.ಸಿ. ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ಹಾಗೂ ಬ್ರೆಲ್‍ಕಿಟ್ ಯೋಜನೆ, ಶ್ರವಣದೋಷವುಳ್ಳ ವಿಕಲಚೇತನರಿಗೆ ಹೊಲಿಗೆಯಂತ್ರ ಯೋಜನೆ, ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆ, ಉದ್ಯೋಗಸ್ಥ ವಿಕಲಚೇತನ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ವಸತಿ ನಿಲಯ, ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ವಿಕಲಚೇತನರ ಸಹಾಯವಾಣಿ ಕೇಂದ್ರ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ಅಭಿವೃದ್ಧಿ ಯೋಜನೆಗಳಲ್ಲಿ ಶೇ.5ರಷ್ಟು ಅನುದಾನ ಮೀಸಲಾತಿ, ವಿಕಲಚೇತನ ವ್ಯಕ್ತಿಗಳಿಗೆ ರಿಯಾಯಿತಿ ಬಸ್ ಪಾಸ್ ವ್ಯವಸ್ಥೆ, ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ವಿಕಲಚೇತನ ವಿದ್ಯಾರ್ಥಿಗಳಾದ ಮೊಳಕಾಲ್ಮೂರು ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಂ ಕುಮಾರಸ್ವಾಮಿ, ಹೊಳಲ್ಕೆರೆ ತಾಲ್ಲೂಕಿನ ಶ್ರೀಮಂಜುನಾಥ ಪ್ರೌಢಶಾಲೆಯ ಆರ್ ಜೀವಿತ, ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಬಿಎಲ್‍ಆರ್ ಜೂನಿಯರ್ ಕಾಲೇಜಿನ ಬಿ.ಎಸ್.ವರ್ಷಿಣಿ, ಚಳ್ಳಕೆರೆ ತಾಲ್ಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಆರ್.ನೀಲಾವತಿ, ಹೊಸದುರ್ಗ ತಾಲ್ಲೂಕಿನ ದಶರಥ ರಾಮೇಶ್ವರ ಪ್ರೌಢಶಾಲೆಯ ಜ್ಯೋತಿ, ಹಿರಿಯೂರು ತಾಲ್ಲೂಕಿನ ಜಿ.ಜೆ.ಸಿ ಯರಬಳ್ಳಿ ಶಾಲೆಯ ಆರ್.ವೃಂದರಾಜ್ ಅವರನ್ನು ಸನ್ಮಾನಿಸಲಾಯಿತು.

ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿಕಲಚೇತನರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ನಿರೂಪಣಾಧಿಕಾರಿ ವಿಜಯಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾ ಮಂಜುಳಾ, ಮಾರುತಿ, ಜಿಲ್ಲಾ ಅಂಗವಿಕಲರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಜಯಣ್ಣ ಸೇರಿದಂತೆ ಎಂಆರ್‍ಡಬ್ಲ್ಯೂ, ವಿಆರ್‍ಡಬ್ಲ್ಯೂ, ಯುಆರ್‍ಡಬ್ಲ್ಯೂ ಕಾರ್ಯಕರ್ತರು, ವಿವಿಧ ಇಲಾಖೆ ಅಧಿಕಾರಿಗಳು, ವಿಕಲಚೇತನರು ಇದ್ದರು.
[t4b-ticker]

You May Also Like

More From Author

+ There are no comments

Add yours