ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ; ತುಮಕೂರಿನ ನಿವೃತ್ತ ಡಿವೈಎಸ್ಪಿಗೆ 4 ವರ್ಷ ಜೈಲು ಶಿಕ್ಷೆ

 

ತುಮಕೂರು:ಸೇವಾ ಅವಧಿಯಲ್ಲಿ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಹೊಂದಿರುವ ಆರೋಪದ ಮೇಲೆ ತುಮಕೂರಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿವೈಎಸ್‍ಪಿ ಟಿ.ಆರ್ ಕೃಷ್ಣಮೂರ್ತಿ(ನಿವೃತ್ತ) ಅವರಿಗೆ 4 ವರ್ಷ ಜೈಲು ಶಿಕ್ಷೆ ಮತ್ತು 17 ಲಕ್ಷ ರೂ.ಗಳ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.ಇಲ್ಲಿನ 7ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಧೀಶ ಎಸ್.ಸುಧೀಂದ್ರನಾಥ್ ಅವರು ಮಾ.20ರಂದು ಈ ತೀರ್ಪು ನೀಡಿದ್ದಾರೆ.ಆರೋಪಿ ಡಿವೈಎಸ್‍ಪಿ ಟಿ.ಆರ್ ಕೃಷ್ಣಮೂರ್ತಿ ಅವರು ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಹೊಂದಿರುವ ಬಗ್ಗೆ 2008ರಲ್ಲಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ತನಿಖೆ ಕೈಗೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಲಾಗಿತ್ತು.ಆರೋಪಿ ಟಿ.ಆರ್ ಕೃಷ್ಣಮೂರ್ತಿ, ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಹೊಂದಿರುವುದು ದೀರ್ಘಕಾಲದ ವಿಚಾರಣೆಯಿಂದ ಸಾಬೀತಾಗಿರುವುದರಿಂದ ಆರೋಪಿಗೆ ಕಲಂ 248(2) ಸಿಆರ್‍ಪಿಸಿ ಅಡಿ 4 ವರ್ಷಗಳ ಸಾದಾ ಸಜೆ ಮತ್ತು 17 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ದಂಡ ಕಟ್ಟಲು ತಪ್ಪಿದಲ್ಲಿ 1 ವರ್ಷಗಳ ಹೆಚ್ಚುವರಿ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಲಾಗಿದೆ.ತುಮಕೂರು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಮೇಗಣ್ಣನವರ್ ಈ ಪ್ರಕರಣದ ತನಿಖೆ ಕೈಗೊಂಡಿದ್ದು, ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಆರ್.ಪಿ.ಪ್ರಕಾಶ್ ವಾದ ಮಂಡಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours