ಮಾಜಿ ಸಿಎಂ ಸಿದ್ದರಾಮಯ್ಯಗೆ ಪೋಲಿಸ್ ಕಾನ್ಸ್ಟೇಬಲ್ ಆವಾಜ್

 

 

 

 

ವಿಜಯಪುರ : ವಿಜಯಪುರ   ಗ್ರಾಮೀಣ ಠಾಣೆ ಪೊಲೀಸ್ ಕಾನ್ ಸ್ಟೇಬಲ್  ವಿಪಕ್ಷ ನಾಯಕ  ಮಾಜಿ ಸಿಎಂ  ಸಿದ್ದರಾಮಯ್ಯ ಅವರಿಗೆ ಫೇಸ್ ಬುಕ್ ನಲ್ಲಿ  ‘ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು’ ಎಂದು ‘ಭಾರತ್ ಜೋಡೊ ಪಾದಯಾತ್ರೆಗೆ ಅಡ್ಡಿಪಡಿಸುವ ಬಿಜೆಪಿ ಹುನ್ನಾರದಲ್ಲಿ ಪೊಲೀಸ್ ನವರೇನಾದರೂ ಶಾಮೀಲಾದ್ರೆ ‘ ಎಂಬ ಸಿದ್ದರಾಮಯ್ಯನವರ ಮಾತಿಗೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಮೆಂಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

 

 

ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್ಟೇಬಲ್ ರಾಜಶೇಖರ ಖಾನಾಪುರ ಎಂಬುವವರೇ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದವರು. ಇವರ ಈ ಕಾಮೆಟಿಗೆ ಪರ ವಿರೋಧ ವ್ಯಕ್ತವಾಗುತ್ತಿದೆ.

ಸರ್ಕಾರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಯವ ಇವರು  ರಾಜಕೀಯ  ಪಕ್ಕಕ್ಕಿಟ್ಟು  ಕೆಲಸ ಮಾಡುವ ಬದಲು ಬಿಜೆಪಿ ಪರ ಹೇಳಿಕೆ ನೀಡಿರುವುದು ಸರಿಯಲ್ಲ ಈತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಪಡಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours