ಅಡಿಕೆ ಬೆಳೆಗೆ ಹನಿ ನೀರಾವರಿಗೆ ಸಬ್ಸಿಡಿ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ: ಶಾಸಕ ಟಿ.ರಘುಮೂರ್ತಿ

 

ಚಿತ್ರದುರ್ಗ: ಜಿಲ್ಲಾ ಪಂಚಾಯತ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನೀರಾವರಿ ಸಂಬಂಧಿಸಿದಂತೆ  ಚಿತ್ರದುರ್ಗ ಜಿಲ್ಲೆಯಲ್ಲಿ ಬಹುಪಾಲು ಕಡೆಗಳಲ್ಲಿ ತೋಟಗಾರಿಕೆ ಬೆಳೆಯಾದ  ಅಡಿಕೆ ಬೆಳೆ ಅಳವಡಿಸುತ್ತಿದ್ದು  ಅಡಿಕೆ ಬೆಳೆಗೆ  ಹನಿ ನೀರಾವರಿ ಪದ್ದತಿಯಲ್ಲಿ ರೈತರಿಗೆ ಸಬ್ಸಿಡಿ ನೀಡುತ್ತಿಲ್ಲ. ಇದು ಸರಿಯಾದ ಪದ್ದತಿಯಲ್ಲ, ಹಾಗಾಗಿ ಅಡಿಕೆ ಬೆಳೆಗೆ ಸಬ್ಸಿಡಿಯಲ್ಲಿ ಹನಿ ನೀರಾವರಿ ಪದ್ದತಿ  ಒದಗಿಸಲು ಸರ್ಕಾರಕ್ಕೆ ಪ್ತಸ್ತಾವನೆ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗೆ ಶಾಸಕ ಟಿ.ರಘುಮೂರ್ತಿ ಸೂಚಿಸಿದರು.ಇದಕ್ಕೆ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಧ್ವನಿಗೂಡಿಸಿ ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲಾ ಮಹಿತಿ ಒಳಗೊಂಡ ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಿದರು.

[t4b-ticker]

You May Also Like

More From Author

+ There are no comments

Add yours