ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.16:
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸುವರು.
ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳನ್ನು ಮಾಡಿಕೊಡಲು ಅಲ್ಲಿನ ಅಧಿಕಾರಿ, ಸಿಬ್ಬಂದಿಗಳು ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಲ್ಲಿ, ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಅನೇಕ ಯೋಜನೆಗಳನ್ನು ಅನುμÁ್ಠನಗೊಳಿಸದೇ ಇರುವುದು ಮತ್ತು ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಅನಾವಶ್ಯಕ ವಿಳಂಬ ಮಾಡುತ್ತಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತನ ಮತ್ತು ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲವು ಸಾರ್ವಜನಿಕ ಅಧಿಕಾರಿಗಳು ಭ್ರμÁ್ಟಚಾರದಲ್ಲಿ ತೊಡಗಿ ದುರಾಡಳಿತ ನಡೆಸುತ್ತಿರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ” ಗೌರವಾನ್ವಿತ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರಿಗೆ ಲೋಕಾಯುಕ್ತ ಅಧಿಕಾರಿಗಳ ಮುಖಾಂತರ ದೂರುಗಳನ್ನು ನಿಗಧಿತ ನಮೂನೆ-1&2 ರಲ್ಲಿ ಸಲ್ಲಿಸಬಹುದಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ವಿವರ: ಇದೇ ಡಿಸೆಂಬರ್ 19ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಮೊಳಕಾಲ್ಮೂರು ತಾಲ್ಲೂಕು ಪಂಚಾಯಿತಿಯಲ್ಲಿ ಪೊಲೀಸ್ ಉಪಾಧೀಕ್ಷಕರು ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಹಾಗೂ ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವೆರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-1 ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು.
ಡಿಸೆಂಬರ್ 20ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆ ಪ್ರವಾಸಿ ಮಂದಿರದ ಪಕ್ಕದಲ್ಲಿರುವ ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು-1 ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಹಾಗೂ ಅಂದು ಬೆಳಿಗ್ಗೆ 10.30 ರಿಂದ 1.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-2 ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು.
ಡಿಸೆಂಬರ್ 21 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷರು-1 ಹಾಗೂ ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-2 ಹಾಜರಿದ್ದು, ದೂರು ಸ್ವೀಕರಿಸಲಿದ್ದಾರೆ.
ಯಾವುದೇ ನ್ಯಾಯಾಲಯಗಳಲ್ಲಿ ಹಾಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಕುರಿತು ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳನ್ನು ಮಾಡಿಕೊಡಲು ಅಲ್ಲಿನ ಅಧಿಕಾರಿ, ಸಿಬ್ಬಂದಿಗಳು ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಲ್ಲಿ, ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಅನೇಕ ಯೋಜನೆಗಳನ್ನು ಅನುμÁ್ಠನಗೊಳಿಸದೇ ಇರುವುದು ಮತ್ತು ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಅನಾವಶ್ಯಕ ವಿಳಂಬ ಮಾಡುತ್ತಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತನ ಮತ್ತು ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲವು ಸಾರ್ವಜನಿಕ ಅಧಿಕಾರಿಗಳು ಭ್ರμÁ್ಟಚಾರದಲ್ಲಿ ತೊಡಗಿ ದುರಾಡಳಿತ ನಡೆಸುತ್ತಿರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ” ಗೌರವಾನ್ವಿತ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರಿಗೆ ಲೋಕಾಯುಕ್ತ ಅಧಿಕಾರಿಗಳ ಮುಖಾಂತರ ದೂರುಗಳನ್ನು ನಿಗಧಿತ ನಮೂನೆ-1&2 ರಲ್ಲಿ ಸಲ್ಲಿಸಬಹುದಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ವಿವರ: ಇದೇ ಡಿಸೆಂಬರ್ 19ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಮೊಳಕಾಲ್ಮೂರು ತಾಲ್ಲೂಕು ಪಂಚಾಯಿತಿಯಲ್ಲಿ ಪೊಲೀಸ್ ಉಪಾಧೀಕ್ಷಕರು ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಹಾಗೂ ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವೆರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-1 ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು.
ಡಿಸೆಂಬರ್ 20ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆ ಪ್ರವಾಸಿ ಮಂದಿರದ ಪಕ್ಕದಲ್ಲಿರುವ ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು-1 ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಹಾಗೂ ಅಂದು ಬೆಳಿಗ್ಗೆ 10.30 ರಿಂದ 1.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-2 ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು.
ಡಿಸೆಂಬರ್ 21 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷರು-1 ಹಾಗೂ ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-2 ಹಾಜರಿದ್ದು, ದೂರು ಸ್ವೀಕರಿಸಲಿದ್ದಾರೆ.
ಯಾವುದೇ ನ್ಯಾಯಾಲಯಗಳಲ್ಲಿ ಹಾಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಕುರಿತು ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
+ There are no comments
Add yours