ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು  ವತಿಯಿಂದ ಡಿಡಿಪಿಐ ರವಿಶಂಕರ್ ರೆಡ್ಡಿಗೆ ಸನ್ಮಾನ

 ಚಿತ್ರದುರ್ಗ:ಎಸ್.ಎಸ್ ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ವತಿಯಿಂದ ಅಭಿನಂದಿಸಲಾಯಿತು. ಸಾಧನೆ ಮಾಡಲು ಅವಿತರ ಶ್ರಮವಹಿಸಿದ ಶಿಕ್ಷಣ  ಇಲಾಖೆಯ ಡಿಡಿಪಿಐ ರವಿಶಂಕರ್ ರೆಡ್ಡಿ ಅವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು  ರಾಜ್ಯಾಧ್ಯಕ್ಷರಾದ ಎಸ್.ರವಿಕುಮಾರ್ ಸನ್ಮಾನಿಸಿದರು. ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷರಾದ ಕೆ.ಟಿ. ಶಿವಕುಮಾರ್ ಇದ್ದರು.