ಇನ್ನೂ 4 ಸಾವಿರ ಅತಿಥಿ ಶಿಕ್ಷಕರನ್ನು ಶೀಘ್ರವೇ ನೇಮಕ: ಸಚಿವ ಬಿ.ಸಿ.ನಾಗೇಶ್

 

 

 

 

ಬೆಂಗಳೂರು:  ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿದ್ದ 30,606 ಅತಿಥಿ ಶಿಕ್ಷಕರ ಪೈಕಿ 22 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನೂ 4 ಸಾವಿರ ಅತಿಥಿ ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್  ಹೇಳಿದ್ದಾರೆ.

 

 

ರಾಜ್ಯದಲ್ಲಿ ಶೇ.70 ಪುಸ್ತಕ ಶಾಲೆಗಳಿಗೆ ಪೂರೈಕೆಯಾಗಿದ್ದು, ಉಳಿದ ಶಾಲೆಗಳಿಗೆ ಆದಷ್ಟು ಬೇಗ ಪಠ್ಯ ಪುಸ್ತಕಗಳನ್ನು ತಲುಪಿಸಲಾಗುವುದು. ಈ ಸಂಬಂಧ ಕರ್ನಾಟಕ ಪಠ್ಯಪುಸ್ತಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

[t4b-ticker]

You May Also Like

More From Author

+ There are no comments

Add yours