ಹಿರಿಯೂರು : ಇಲ್ಲಿನ ನಗರದ ಹೊರವಲಯದ ಅಕ್ಷಯ ಫುಡ್ ಪಾರ್ಕ್ ರೋಡ್ನಲ್ಲಿರುವ ಮಹೇಶ್ ಫಾರಂ ಹೌಸ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್ ಗಳ ಮೇಲೆ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಪ್ರಶಾಂತ್ ಕೆ. ಪಾಟೀಲ್ ಅವರು ದಾಳಿ ನಡೆಸಿದ್ದಾರೆ.
ಇನ್ನು ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸಂಗ್ರಹಿಸಿದ್ದ ಐದು ಗ್ಯಾಸ್ ಸಿಲಿಂಡರ್ ಸೇರಿದಂತೆ ಮತ್ತಿತರರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ಈಗಾಗಲೇ ಆರೋಪಿಯ ವಿರುದ್ಧ ಕಳೆದ ವರ್ಷ ಎರಡು ಪ್ರಕರಣಗಳು ದಾಖಲಾಗಿದ್ದವು. ಇದೀಗ ಆರೋಪಿ ತನ್ನ ಚಾಳಿಯನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ದಾಳಿ ನಡೆಸಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿ ಮಹೇಶ್ ಹಾಗೂ ಸಂತೋಷ್ ತಲೆಮರೆಸಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ದಾಳಿಯಲ್ಲಿ ಅಧಿಕಾರಿಗಳಾದ ಆರ್. ಐ.ಸ್ವಾಮಿ, ವಿಎ ಮಾಯವರ್ಮ,ಡ್ರೈವರ್ ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ದಾಳಿ ವೇಳೆ ಇದ್ದರು.
[t4b-ticker]
+ There are no comments
Add yours