ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು (car) ಬೆಂಕಿಗಾಹುತಿಯಾದ ಘಟನೆ ಹಿರಿಯೂರು ನಗರದ ಹೊರವಲಯದಲ್ಲಿ ನಡೆದಿದೆ.
ನಗರದ ವಿವಿ ಸಾಗರ ತಿರುವಿನ ಬಳಿ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕಾರು ಹೊನ್ನಾಳಿ ಮೂಲದ ರಮೇಶಾಚಾರ್ ಎಂಬವರಿಗೆ ಸೇರಿದ್ದಾಗಿದೆ. ಕಾರು ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಕಾರಿನಲ್ಲಿ ಬೆಂಕಿ ಹೊತ್ತಕೊಂಡು ಕಾರು ಬೆಂಕಿಗೆ ಆಹುತಿಯಾಗಿದೆ. ಶಾರ್ಟ ಸರ್ಕ್ಯೂಟ್ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಓಬವ್ವ ವೃತ್ತದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಮುಂದಾದರೆ ನಾವು ಸುಮ್ಮನಿರಲ್ಲ
ಸ್ಥಳಕ್ಕೆ ಹಿರಿಯೂರು ನಗರ ಪೋಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪತಿಶೀಲನೆ ನಡೆಸಿದ್ದಾರೆ. ಇನ್ನು ಹೆಚ್ಚಿನ ಮಾಹಿತಿ ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.
[t4b-ticker]
+ There are no comments
Add yours