ಮೈಸೂರು: ರಾಜ್ಯದ ಶಕ್ತಿ ದೇವತೆಯನ್ನು ಇಂದು ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ ಚಾಮುಂಡೇಶ್ವರಿ ಬೆಟ್ಟದ ದೇವಾಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತೆಂಗಿನಕಾಯಿ ಒಡೆಯಲು ಯತ್ನಿಸಿದ ವಸತಿ ಸಚಿವ ವಿ.ಸೋಮಣ್ಣ ಅವರು ಮುಜುಗರದ ಪರಿಸ್ಥಿತಿಗೆ ಸಿಲುಕಿದರು.
ಸೋಮಣ್ಣ ಹಾಕಿದ ಇಡುಗಾಯಿ ಒಡೆಯಲಿಲ್ಲ. ತೆಂಗಿನಕಾಯಿಯು ವ್ಯಕ್ತಿಯನ್ನು ದುಷ್ಟರಿಂದ ರಕ್ಷಿಸುತ್ತದೆ ಎಂದು ಸಾಮಾನ್ಯವಾಗಿ ಪರಿಗಣಿಸಲಾಗುತ್ತದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವಾಗ ತೆಂಗಿನಕಾಯಿ ಒಡೆಯುವುದು ಒಂದು ಪ್ರಮುಖ ಆಚರಣೆಯಾಗಿದೆ. ತೆಂಗಿನಕಾಯಿ ಒಡೆಯದ ಕಾರಣ ಅಲ್ಲಿ ಸೇರಿದ್ದವರು ಅಶುಭ ಸೂಚನೆಯೇ ಎಂದು ಚರ್ಚೆ ನಡೆಸುತ್ತಿರುವುದು ಕೇಳಿಬಂದಿದೆ.
[t4b-ticker]
+ There are no comments
Add yours