ಪಟಾಕಿ ಸಿಡಿದು ಇಬ್ಬರ ಕಣ್ಣಿಗೆ ಗಂಭೀರ ಗಾಯ

 

 

 

 

ಬೆಂಗಳೂರು : ದೀಪಾವಳಿ ಹಬ್ಬಕ್ಕೂ ಮುನ್ನವೇ ದುರಂತ ಸಂಭವಿಸಿದ್ದು, ಪಟಾಕಿ ಸಿಡಿದು ಇಬ್ಬರು ಕಣ್ಣಿಗೆ ಗಂಭೀರ ಗಾಯಗಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದೀಪಾವಳಿ ಹಬ್ಬದ ಕಾರಣ ಇಬ್ಬರು ನಿನ್ನೆ ಪಟಾಕಿ ಹೊಡೆಯಲು ಹೋಗಿದ್ದಾರೆ.

 

 

ಈ ವೇಳೆ ಏಕಾಏಕಿ ಪಟಾಕಿ ಸಿಡಿದು ಸುರೇಶ್ (35) ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಪಟಾಕಿ ಹಚ್ಚುವದನ್ನು ನೋಡುತ್ತಿದ್ದ ಮನೋಜ್ (10) ಎಂಬ ಬಾಲಕನಿಗೂ ಗಂಭೀರ ಗಾಯಗಳಾಗಿದೆ. ಸದ್ಯ, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮಿಂಟೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿ ಆದ ಸಂದರ್ಭದಲ್ಲಿ ಚಿಕಿತ್ಸೆ ನೀಡಲು ದಿನದ 24 ಗಂಟೆ ತುರ್ತು ಚಿಕಿತ್ಸೆ ಲಭ್ಯವಿರಲಿದೆ ಎಂದು ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ತಿಳಿಸಿದ್ದಾರೆ. ಇದಕ್ಕಾಗಿ ಸಹಾಯವಾಣಿ 9481740317, 9480832430 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours