ಅಡಿಕೆ ಬೆಲೆಯಲ್ಲಿ ಏರಿಕೆ ರೈತರಿಗೆ ಅಲ್ಪ ಖುಷಿ Posted on January 17, 2023January 17, 2023 by NEWS19 KANNADA ಚಿತ್ರದುರ್ಗ : ಮಧ್ಯ ಕರ್ನಾಟಕ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಮತ್ತೆ ಚೇತರಿಕೆ ಲಕ್ಷಣ ಕಾಣುತ್ತಿದೆ. ಪ್ರತಿ ದಿನದ ವ್ಯಾಪಾರದಲ್ಲಿ100 ರಿಂದ 300 ಏರಿಳಿತ ಕಾಣುತ್ತಿದೆ. ಇವತ್ತಿನ(ಜ.16) ಬೆಲೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಕಂಡಿದೆ. ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಕ್ವಿಂಟಾಲ್ ಗೆ ದರ 46,599 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ 46,499 ರೂ. ದಾಖಲಾಗಿತ್ತು. ಇಂದು 100 ರೂ.ಯಷ್ಟು ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿರುವುದು ರೈತರಿಗ ಸಂತಸ ತಂದಿದೆ. ಇವತ್ತಿನ ಉತ್ತಮ ರಾಶಿಯ ಕನಿಷ್ಠ ಬೆಲೆ 45,299 ಆಗಿದ್ದು, ಗರಿಷ್ಠ ಬೆಲೆ 46,599 ಹಾಗೂ ಸರಾಸರಿ ಬೆಲೆ 45,734 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ 34,271, ಗರಿಷ್ಠ ಬೆಲೆ 38,689 ಹಾಗೂ 35,533 ಏರಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಜಗಳೂರು, ಹರಿಹರ, ನ್ಯಾಮತಿ, ಮಾಯಕೊಂಡ ಸೇರಿದಂತೆ ಎಲ್ಲ ಕಡೆ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಅಡಿಕೆ ಬೆಲೆ 39 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡಿದ್ದರೂ ನೂರು, ಇನ್ನೂರು ರೂಪಾಯಿ ಏರಿಳಿತ ಕಾಣುತ್ತಿದೆ. ಜನವರಿಯಲ್ಲಿ ಏರಿಕೆ ಕಾಣುತ್ತಿರುವುದು ರೈತರ ಮೊಗದಲ್ಲಿ ಸಂತಸ ಮೂಡುವಂತೆ ಮಾಡಿದೆ. ಮುಂಬರುವ ದಿನಗಳಲ್ಲಿ ಅಡಿಕೆ ಧಾರಣೆ ಮತ್ತಷ್ಟು ಚೇತರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. [t4b-ticker]
+ There are no comments
Add yours