ಎಲ್ಲಾ ವರ್ಗಕ್ಕೆ ನ್ಯಾಯ ಒದಗಿಸುವ ಕೆಲಸ ಗ್ರಾ.ಪಂ.ಅಧ್ಯಕ್ಷರು ಮಾಡಬೇಕು:ಎನ್.ರಘುಮೂರ್ತಿ

 

 

 

 

ಚಳ್ಳಕೆರೆ:ಅಬ್ದುಲ್ ನಜೀರ್ ಸಾಬ್ ರವರು ಗ್ರಾಮೀಣಾಭಿವೃದ್ಧಿಯ ಕಲ್ಪನೆ ಕಂಡಂತವರು ಅವರು ಮಹಾತ್ಮ ಗಾಂಧೀಜಿ ಅವರು ಹಾಕಿಕೊಟ್ಟಂತ ನೈರ್ಮಲಕರಣದ ಕನಸು  ಹೊಂದಿದ್ದು  ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.

 

 

ತಾಲೂಕಿನ  ನಗರಂಗೆರೆ  ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಚುನಾವಣೆ ಪ್ರಕ್ರಿಯೆ ನಂತರ  ಕುಮಾರಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಈ ಸಂದರ್ಭದಲ್ಲಿ  ತಹಶೀಲ್ದಾರ್  ಮಾತನಾಡಿ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರಸ್ವಾಮಿ ಅವರು ಸರ್ಕಾರದ ಯೋಜನೆ ಸೌಲಭ್ಯಗಳನ್ನು ಪ್ರತಿಯೊಬ್ಬ  ಕುಟುಂಬಕ್ಕೆ  ಮುಟ್ಟಿಸುವ ಕೆಲಸ ಮಾಡಬೇಕಿದೆ.ಬಡವರ ಪರ ಕೆಲಸ ಮಾಡುತ್ತೇನೆ ಎಂದು ಪ್ರತಿಜ್ಞೆ  ತೆಗೆದುಕೊಳ್ಳಬೇಕು.
 ಈ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ  ಯಾವುದೇ  ಅಸಹಾಯಕರು ಸೌಲಭ್ಯ ವಂಚಿತರಾಗಬಾರದು. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ  ವರ್ಗದ ಜನರಿಗೆ ಯಾವ ಸೌಲಭ್ಯಗಳಿವೆ ಎಂದು ತಿಳಿದು ಆ ಸೌಲಭ್ಯಗಳನ್ನು  ಜನರಿಗೆ ಒದಗಿಸುವ ನಿಟ್ಟಿನಲ್ಲಿ ಎಲ್ಲ ಪಂಚಾಯಿತಿ ಸದಸ್ಯರೊಂದಿಗೆ ಸಮನ್ವಯ ಮಾಡಿಕೊಂಡು ಪಂಚಾಯಿತಿ ಅಭಿವೃದ್ಧಿ ಕೊಂಡೊಯ್ಯಬೇಕು.
 ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ  ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರಸ್ವಾಮಿ ಮತ್ತು ಎಲ್ಲ ಸದಸ್ಯರುಗಳು ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours