ಚಿತ್ರದುರ್ಗ: (chitradurga): ನಗರದ ಚಳ್ಳಕೆರೆ ಗೇಟ್ ಬಳಿಯ ಕಾರಾಗೃಹ ಬಳಿ ಸಮೀಪದ ಪಾಳು ಬಿದ್ದ ಮನೆಯೊಂದರಲ್ಲಿ ಐದು ಜನರ ಅಸ್ಥಿಪಂಜರ ಪ್ರಕರಣ ಜಿಲ್ಲೆಯ ಜನತೆಯನ್ನು ಆತಂಕಕ್ಕೆ ತಳ್ಳಿದೆ. ಇದೀಗ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಐವರ ಸಾವಿಗೆ ಆ ಇಬ್ಬರು ವ್ಯಕ್ತಿಗಳು ಕಾರಣರಾದರಾ ಎಂಬ ಪ್ರಶ್ನೆ ಕಾಣತೊಡಗಿದೆ.
ಪ್ರಕರಣವನ್ನು ಎಳೆ ಎಳೆಯಾಗಿ ತನಿಖೆ ಮಾಡುತ್ತಿರುವ ಜಿಲ್ಲೆಯ ಪೊಲೀಸರಿಗೆ ( police) ಇದೀಗ ಪ್ರಕರಣವನ್ನು ಭೇದಿಸಲು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪಾಳು ಬಿದ್ದ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿತ್ತು. ಡೆತ್ ನೋಟ್ ಸಿಕ್ಕಿರುವ ಬಗ್ಗೆ ಜಿಲ್ಲಾ ವರಿಷ್ಠಾಧಿಕಾರಿ ಅಲ್ಲಗಳೆದಿದ್ದರು, ಇದೀಗ ಸಾವಿಗೆ ಡೆತ್ನೋಟ್ನಲ್ಲಿ ಇಬ್ಬರು ವ್ಯಕ್ತಿಗಳ ಹೆಸರನ್ನು ಕುಟುಂಬ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಸಿಕ್ಕಿರುವ ಆತ್ಮಹತ್ಯೆ ಪತ್ರದಲ್ಲಿ ಇಬ್ಬರು ವ್ಯಕ್ತಿಗಳು ನೀಡುತ್ತಿರುವ ಚಿತ್ರಹಿಂಸೆಯಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಉಲ್ಲೇಖಿಸಿದ್ದು ಆ ಇಬ್ಬರು ವ್ಯಕ್ತಿಗಳು ಎಲ್ಲಿಯವರು ಎಂಬ ಹುಡುಕಾಟ ಶುರುವಾಗಿದೆ.
ಇದನ್ನೂ ಓದಿ: ಐವರ ಅಸ್ಥಿಪಂಜರ್ ಕೇಸ್ ಗೆ ಟ್ವಿಸ್ಟ್ ,ಸಿಕ್ಕಿದ ಡೇತ್ ನೋಟಲ್ಲಿ ಏನಿದೆ.
ಚಿತ್ರದುರ್ಗದ ಓರ್ವ ವ್ಯಕ್ತಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದ ಓರ್ವ ವ್ಯಕ್ತಿ ಎಂಬ ಶಂಕೆ ವ್ಯಕ್ತವಾಗಿದ್ದು, ಹೆಸರು ಮಾತ್ರ ಬಹಿರಂಗವಾಗಿಲ್ಲ. ಜಮೀನು ಪ್ರಕರಣದ ವಿಚಾರಣೆ ವೇಳೆ ಇಬ್ಬರು ವ್ಯಕ್ತಿಗಳು ನಮಗೆ ಹಿಂಸೆ ನೀಡುತ್ತಿದ್ದಾರೆ. ಅವರಿಂದಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಡೆತ್ ನೋಟ್ನಲ್ಲಿ ಹೇಳಿಕೊಂಡಿದ್ದಾರೆ. ಈ ವ್ಯಕ್ತಿಗಳ ಹೆಸರನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಅಲ್ಲದೇ ಡೆತ್ನೋಟ್ನಲ್ಲಿಯೂ ಸಾಕಷ್ಟು ಅನುಮಾನಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಇಬ್ಬರ ವ್ಯಕ್ತಿಗಳ ಹುಡುಕಾಟಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
[t4b-ticker]
+ There are no comments
Add yours