ಶಿವಮೊಗ್ಗ:(Shimoga) ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವರ ಅರಗಜ್ಞಾನೇಂದ್ರ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಗ್ರಾಮ ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಕೈ ಇಲ್ಲದೇ ಕಾಲಲ್ಲಿ ಎರಡು ಪತ್ರ ಬರೆದ ಶಿಕ್ಷಕಿ, ಫೋಟೋ ಕ್ಲಿಕಿಸಿದ ರಾಹುಲ್
(There is no cut in the
power of Panchayat President)
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯಿತಿ ರಾಜ್ ಅಧಿನಿಯಮ 1993 ಕ್ಕೆ ತಿದ್ದುಪಡಿ ತಂದು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಮೊಟಕುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಭೆ ತೀರ್ಮಾನ ಕೈಗೊಂಡಿತ್ತು. ಆದರೆ ಸರ್ಕಾರದ ಮುಂದೆ ಇಂತಹ ಯಾವ ನಿರ್ಧಾರ ಇಲ್ಲ ಎಂಬುದನ್ನು ಸಿಎಂ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಹೇಳುವ ಮೂಲಕ ಗ್ರಾಮ ಪಂಚಾಯತಿ ಅಧ್ಯಕ್ಷರು ನಿಟ್ಟುಸಿರು ಬಿಟ್ಟಿದ್ದಾರೆ. (Araga )
ತಾಕತ್ ಅಂದ್ರೆ CM ಬೊಮ್ಮಾಯಿ ತೋರಿಸವ್ರೆ
[t4b-ticker]
+ There are no comments
Add yours