ಬೆಂಗಳೂರು,ಜುಲೈ 04: ಶಾಲೆಗಳು ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ಶಾಲೆಗೆ ಬಹಳ ಖುಷಿಯಿಂದ ಆಗಮಿಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಕೆಲವು ಸಮಸ್ಯೆ ಎದುರಾಗುತ್ತಿರುವುದು ಪೋಷಕರ ತಲೆ ನೋವನ್ನು ಹೆಚ್ಚಿಸಿದೆ. ಶಾಲೆಗೆ ಹೋಗುವ ಮಕ್ಕಳ ಬ್ಯಾಗ್ ಹೊರೆಯಾಗಿದ್ದು ಇದರಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಿದೆ.
ಮಕ್ಕಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯುತ್ತಿದೆ. ಮಕ್ಕಳು ಬ್ಯಾಗ್ ಹೊರೆಯನ್ನು ತಗ್ಗಿಸಲು ಕ್ರಮವನ್ನು ಕೈಗೊಳ್ಳಲಾಗುತ್ತದೆ. ವೇಳಾಪಟ್ಟಿಗೆ ಅನುಗುಣವಾಗಿ ಬ್ಯಾಗ್ ತರಲು ಸೂಚನೆಯನ್ನು ಮುಖ್ಯೋಪಾಯದ್ಯಾಯರು ನೀಡಬೇಕು. ಪ್ರತಿ ಶನಿವಾರ ಬ್ಯಾಗ್ ಲೆಸ್ ಡೇ ಮಾಡಲು ಸಹ ಚಿಂತನೆಯನ್ನು ಮಾಡಲಾಗುತ್ತಿದ್ದು ಈ ದಿನದಂದು ಮಕ್ಕಳಿಗೆ ಕ್ರೀಡೆಯಲ್ಲಿ ತೊಡಗಿಸುವ ಮತ್ತು ಯೋಗವನ್ನು ಹೇಳಿಕೊಡುವ ಮೂಲ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಅನುಕೂಲವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
[t4b-ticker]
+ There are no comments
Add yours