ಚಳ್ಳಕೆರೆ-೧೧ : ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಡ್ಲಾರಹಟ್ಟಿ ಗ್ರಾಮದ ಚೌಡಮ್ಮ ದೇವಸ್ಥಾನದ ಬಳಿ ಹಾಡುಹಗಲೇ ಜೂಜಾಟವಾಡುತ್ತಿದ್ದ ಚಿತ್ರಯ್ಯನಹಟ್ಟಿಯ ಎಂ.ಪಾಪಣ್ಣ ಇತರೆ ಮೂವರನ್ನು ವಶಕ್ಕೆ ಪಡೆದ ಪೊಲೀಸರು ಅವರಿಂದ ಜೂಜಾಟದ ಹಣ ೨೧೫೦ರೂ ವಶಪಡಿಸಿಕೊಂಡಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಪೇದೆ ವಿಶಾಲ್ ಮತ್ತು ಸಿಬ್ಬಂದಿ ವರ್ಗ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ಧಾರೆ. ಎಎಸ್ಐ ಶಿವಣ್ಣ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ಧಾರೆ.
ಇದನ್ನೂ ಓದಿ: ವಿಶ್ವ ಮೆಚ್ಚಿದ ನಾಯಕ ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು:ಎಂ.ಸಿ.ರಘುಚಂದನ್
[t4b-ticker]
+ There are no comments
Add yours