ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗಿದೆ.
ನಾಳೆ ವಿಶ್ವಾಸ ಮತ ಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಸಿಎಂ ಠಾಕ್ರೆ ಘೋಷಿಸಿದ್ದಾರೆ.
ಇದರ ಬೆನ್ನಲ್ಲೇ ಬಿಜೆಪಿ ಸಂಭ್ರಮ ಆಚರಣೆ ಮಾಡಿದೆ. ಬಂಡಾಯ ಶಾಸಕರು ಸಹ ಸಂಭ್ರಮ ಆಚರಣೆ ಮಾಡಿಕೊಂಡಿದ್ದು ಮುಂದೆ ಯಾವ ರೀತಿಯ ಬೆಳವಣಿಗೆ ಆಗಲಿದೆ ಎಂದು ಕಾದು ನೋಡಬೇಕಿದೆ.
[t4b-ticker]
+ There are no comments
Add yours