ಚಿತ್ರದುರ್ಗ,ಫೆ.17(ಕರ್ನಾಟಕ ವಾರ್ತೆ):
“ವಿಶ್ವಗುರು ಬಸವಣ್ಣ ಸಾಂಸ್ಕøತಿಕ ನಾಯಕ” ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಅದರಂತೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶನಿವಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ವಿಶ್ವ ಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ನುಡಿದಂತೆ ನೆಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗರಹಿತ, ಜಾತಿರಹಿತ, ಮೌಢ್ಯಗಳಿಲ್ಲದ ವೈಚಾರಿಕತೆ ಸಮಾಜ ಸ್ಥಾಪನೆಯ ಆಶಯದಿಂದ ಅವರು ವಚನಗಳನ್ನು ರಚಿಸಿದರು. ಕಾಯಕ, ದಾಸೋಹ ಬೋಧಿಸಿದ ಬಸವಣ್ಣನವರು ಯಾರು ಕುಳಿತು ತಿನ್ನದೆ ಕಾಯಕದಲ್ಲಿ ತೊಡಗಬೇಕೆಂದು ಪ್ರತಿಪಾದಿಸಿದ್ದರು. ಇಂತಹ ಮಹಾನ್ ವ್ಯಕ್ತಿಯ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಬಜೆಟ್ ಸಿದ್ಧತೆ : ರೂ.112.78 ಕೋಟಿ ಆಯವ್ಯಯ ಮಂಡನೆ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
+ There are no comments
Add yours