ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿ ವಿ.ಹರೀಶ್ ನೇಮಕ

 

ಚಿತ್ರದುರ್ಗ:  ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾಲುವೆಹಳ್ಳಿ ಹರೀಶ್ ಅವರನ್ನು ನೇಮಕ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಾಲುವೇಹಳ್ಳಿ ವಿ ಹರೀಶ್ ಅವರನ್ನು ನೇಮಕ ಮಾಡಿ ಆದೇಶ ಆದೇಶ ಹೊರಡಿಸಿರುವ ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಜಿ ಆರ್ ಕಾರೆಹಳ್ಳಿ ಉಲ್ಲಾಸ್ ರವರು ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸಲು ಯುವ ಕಾಂಗ್ರೆಸ್ ಸಮಿತಿ ಪ್ರಮುಖ ಪಾತ್ರ ವಹಿಸಿರುವ ಈ ಸಂದರ್ಭದಲ್ಲಿ ಚಿತ್ರದುರ್ಗ ಯುವ ಕಾಂಗ್ರೆಸ್ ಸಮಿತಿಯು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ ವಿ ಶ್ರೀನಿವಾಸ್ ರವರು ಹಾಗೂ ರಾಜ್ಯಾಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರ ಪರಿಗಣನೆಗೆ ತಂದು ಜಿಲ್ಲಾ ಉಸ್ತುವಾರಿಗಳ ಸಲಹೆ ಪಡೆದು ಚಿತ್ರದುರ್ಗ ಜಿಲ್ಲೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ  ನೇಮಕ ಮಾಡಲಾಗಿದೆ.

ಹರೀಶ್ ರವರು ಮುಂದಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ಸನ್ನು ಬಲಪಡಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವಂತೆ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours