ಏಪ್ರಿಲ್ 3ರಂದು ವದ್ದೀಕೆರೆ ಸಿದ್ದೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.21:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ವದ್ದೀಕೆರೆ ಗ್ರಾಮದ ಕಾಲಭೈರವೇಶ್ವರ ಸ್ವಾಮಿ (ಶ್ರೀ ಸಿದ್ದೇಶ್ವರ ಸ್ವಾಮಿ) ಜಾತ್ರಾ ಮಹೋತ್ಸವವು ಮಾರ್ಚ್ 31 ರಿಂದ ಏಪ್ರಿಲ್ 5 ರವರೆಗೆ ನಡೆಯಲಿದ್ದು, ಏಪ್ರಿಲ್ 3ರಂದು ಬ್ರಹ್ಮ ರಥೋತ್ಸವ, ಏಪ್ರಿಲ್ 4ರಂದು ಸಿದ್ದಭುಕ್ತಿ ಸೇವೆ ಜರುಗಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಚ್ 31 ರಂದು ರಾತ್ರಿ 8 ಗಂಟೆಗೆ ಕಂಕಣಧಾರಣೆ ನಡೆಯಲಿದೆ. ಏಪ್ರಿಲ್ 1 ರಂದು ರಾತ್ರಿ 7 ಗಂಟೆಗೆ ಅಗ್ನಿಕುಂಡ ಜರುಗಲಿದೆ. ಏಪ್ರಿಲ್ 2 ರಂದು ರಾತ್ರಿ 8 ಗಂಟೆಗೆ ಚಿಕ್ಕ ರಥೋತ್ಸವ ನಡೆಯಲಿದೆ. ಏಪ್ರಿಲ್ 3 ರಂದು ಮಧ್ಯಾಹ್ನ 3.30ಕ್ಕೆ ಹೂವಿನಪಲ್ಲಕಿ ಉತ್ಸವ (ಅಡ್ಡಪಲ್ಲಕ್ಕಿ ಉತ್ಸವ) ಹಾಗೂ ಜಾನಪದ ಕಲಾವಿದರಿಂದ ವೈವಿದ್ಯಮಯ ಮೆರವಣಿಗೆ ಹಾಗೂ ಸಂಜೆ 4.30ಕ್ಕೆ ಬ್ರಹ್ಮ ರಥೋತ್ಸವ ನಡೆಯಲಿದೆ. ಏಪ್ರಿಲ್ 4 ರಂದು ಉಂಡೆ, ಮಂಡೆ, ಸಿದ್ಧಭುಕ್ತಿ ನಡೆಯಲಿದೆ. ಏಪ್ರಿಲ್ 5 ರಂದು ಕಿರುಬಾನ, ವಸಂತೋತ್ಸವ ಮತ್ತು ಸಂಜೆ 6 ಕ್ಕೆ ಕಂಕಣ ವಿಸರ್ಜನೆ ಕಾರ್ಯಕ್ರಮ ನೆರವೇರಲಿದೆ ಎಂದು ಹಿರಿಯೂರು ತಹಶೀಲ್ದಾರ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours