ವಿಕಲಚೇತನರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.04: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಿಗೆ ವಿಕಲಚೇತನರಿಂದ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಕೆ ದಿನಾಂಕವನ್ನು ಸೆ.30 ರಿಂದ ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.

ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪೆÇ್ರೀತ್ಸಾಹಧನ, ಮರಣ ಪರಿಹಾರ ನಿಧಿ (ಎಂಆರ್‍ಡಬ್ಲ್ಯೂ ವಿಆರ್‍ಡಬ್ಲ್ಯೂ), ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ವಿಕಲಚೇತನರು ಸುವಿಧಾ ತಂತ್ರಾಂಶದಡಿ ಆನ್‍ಲೈನ್ ಮೂಲಕ ಅರ್ಜಿಸಲ್ಲಿಸಬಹುದು.
ಇಲಾಖೆಯ ವೆಬ್‍ಸೈಟ್ https://sevasindhu.karnataka.gov.in/sevasindhu/departmentserviceನಲ್ಲಿ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಿ ಅದರ ಪ್ರತಿಯನ್ನು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934,  ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮೂರು-9742725576 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಹಾಗೂ ಕಚೇರಿಗೂ ಭೇಟಿ ನೀಡಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
[t4b-ticker]

You May Also Like

More From Author

+ There are no comments

Add yours