ಹಿರಿಯೂರು: ತಾಲೂಕು ಗೂಯಿಲಾಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ ರವರು ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.
ಆಸ್ಪತ್ರೆಗೆ ರಸ್ತೆ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಸಲು ಶಾಸಕರು ಸೂಚಿಸಿದರು.
ಆಸ್ಪತ್ರೆ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸರ್ವೆ ಮಾಡಿ ಸೋಂಕಿತರನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಿದರು.
ಗರಿಷ್ಠ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಲು ವೈದ್ಯರಿಗೆ ಸೂಚಿಸಿದರು.
ಸರ್ಕಾರದ ಮಾರ್ಗ ಸೂಚಿಗಳಂತೆ ಲಸಿಕೆ ಪಡೆಯಲು ಸಾರ್ವಜನಿಕರಿಗೆ ಶಾಸಕರು ಮನವಿ ಮಾಡಿದರು.
ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಡಾ. ರಾಘವೇಂದ್ರ, ಮುಖಂಡರಾದ ಹರೀಶ್, ಪ್ರಕಾಶ್, ಜಗನ್ನಾಥ ಮುಂತಾದವರು ಉಪಸ್ಥಿತರಿದ್ದರು.
+ There are no comments
Add yours