ಚಿತ್ರದುರ್ಗ, ಮಾ.19: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಕೋಲಾರ ಸ್ಪರ್ದೆಯಿಂದ ಹಿಂದೆ ಸರಿದ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಫ್ಟ್ ಕಾರ್ನರ್ ತೋರಿದ್ದು, ಕ್ಷೇತ್ರ ಆಯ್ಕೆ ಅದು ಅವರ ಆಂತರಿಕ ವಿಚಾರ ಎಂದಷ್ಟೇ ಹೇಳಿದ್ದಾರೆ.
ಹೊಳಲ್ಕೆರೆ ಪಟ್ಟಣದಲ್ಲಿ ಇಂದು ಸರ್ಕಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ ಬಸವರಾಜ ಬೊಮ್ಮಾಯಿ ಅವರು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸ್ಪರ್ಧೆ ಮಾಡಲು ಕ್ಷೇತ್ರವೆ ಸಿಗುತ್ತಿಲ್ಲ ಎಂದು ಹರಿಹಾಯುತ್ತಿದ್ದ ಬಸವರಾಜ ಬೊಮ್ಮಯಿ ಇಂದು ಸಿದ್ದರಾಮಯ್ಯ ಅವರ ಕ್ಷೇತ್ರ ಆಯ್ಕೆ ಕುರಿತು ಈಗಾಗಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದೇನೆ. ಅಲ್ಲದೆ ಅದು ಅವರ ಆಂತರಿಕ ವಿಚಾರ ಎಂದು ಮೃಧು ಧೋರಣೆ ತೋರಿ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳ ನೌಕರರು, ಮತ್ತಿತರರು ಸರ್ಕಾರದಿಂದಲೇ ವೇತನ ನೀಡಬೇಕೆಂದು ಒತ್ತಾಯಿಸಿ ಧರಣಿ ಕೈಗೊಂಡಿರುವ ವಿಚಾರಕ್ಕೆ ಪ್ರತಿಕ್ರಿಯೇ ನೀಡಿದ ಅವರು, ಚುನಾವಣೆ ಸಂದರ್ಭಗಳಲ್ಲಿ ಈ ರೀತಿ ಪ್ರತಿಭಟನೆಗಳು ನಡೆಯುತ್ತಿರುತ್ತವೆ. ಪ್ರತಿಭಟನೆಗೆ ಕೈ ಹಾಕದಂತೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳಿದ ಅವರು, ಹನಿ ನೀರಾವರಿ ಯೋಜನೆಗೆ ಅಡಿಕೆ ಬೆಳೆ ಸೇರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
+ There are no comments
Add yours