ನಟ ಸುದೀಪ್ ಭೇಟಿ ಮಾತುಕತೆ ಬಗ್ಗೆ ಡಿಕೆಶಿ ಹೇಳಿದ್ದೇನು?

 

 

 

 

ಡಿಕೆಶಿ- ಸುದೀಪ್‌ ಭೇಟಿ

 

 

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಜೆಪಿ ನಗರದಲ್ಲಿರುವ ಕಿಚ್ಚ ಸುದೀಪ್‌ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ಅವರೊಂದಿಗೆ ಊಟವನ್ನೂ ಸವೆದಿದ್ದಾರೆ. ಈ ಸುದ್ದಿಯೂ ಹರಿದಾಡುತ್ತಿದ್ದಂತೆ ರಾಜಕೀಯ ವಲಯದಲ್ಲಿ ಹಲವಾರು ಮಾತುಗಳು ಹರಿದಾಡುತ್ತಿವೆ. ಈ ಭೇಟಿಯ ಕಾರಣವನ್ನು ಈಗ ಡಿಕೆ ಶಿವಕುಮಾರ್ ಅವರೇ ಬಹಿರಂಗಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನಾನಾ ಚಿತ್ರರಂಗಗಳಲ್ಲಿ ಛಾಪು ಮೂಡಿಸಿ ಕರ್ನಾಟಕದ ಕೀರ್ತಿ ಹೆಚ್ಚಿಸಿದ ನಟ ಶ್ರೀ ಕಿಚ್ಚ ಸುದೀಪ್‌ ಅವರನ್ನು ಭೇಟಿ ಮಾಡಿದೆ. ಈ ವೇಳೆ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದೆವು. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್‌ ರೂಪಿಸುತ್ತಿರುವ ವಿಶೇಷ ಪ್ರಣಾಳಿಕೆಗೆ ಅವರ ಸಲಹೆಗಳನ್ನು ಪಡೆದೆ’ ಎಂದು ಹೇಳಿದ್ದಾರೆ.

ಈ ಕುರಿತು ಕಿಚ್ಚ ಸುದೀಪ್‌ ಅವರು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಟ್ವಿಟರ್‌ನಲ್ಲಿಯೂ ಈ ಬಗ್ಗೆ ಬರೆದುಕೊಂಡಿಲ್ಲ. ಡಿಕೆಶಿ- ಕಿಚ್ಚ ಸುದೀಪ್‌ ಭೇಟಿ ವೇಳೆ, ಕೆಪಿಸಿಸಿ ಯುವ ಮುಖಂಡ ಮೊಹಮ್ಮದ್‌ ನಲಪಾಡ್‌ ಸಹ ಹಾಜರಿದ್ದರು. ಇದಕ್ಕೆ ಸಂಬಂಧಿಸಿದ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ.

[t4b-ticker]

You May Also Like

More From Author

+ There are no comments

Add yours