2023 ವಿಧಾನಸಭೆ ಚುನಾವಣೆಗೆ ಹೊಸ ಕ್ಷೇತ್ರಕ್ಕೆ ಹೊರಟ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆ ಕ್ಷೇತ್ರ ಯಾವುದು?

 

ಬೆಳಗಾವಿ:  2023  ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಈ ವಿಚಾರವಾಗಿ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ  ಮಾಧ್ಯಮದವರು ಜೊತೆ  ಮಾತನಾಡಿದ ಮಾಜಿ ಸಚಿಚ ಸತೀಶ್ ಜಾರಕಿಹೊಳಿ  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ಮಾಡುತ್ತಿರುವುದು ಸತ್ಯ  ಎಂದು ತಿಳಿಸಿದ್ದಾರೆ.

ನಾನು ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದೇನೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕಿದೆ. ಇದಕ್ಕಾಗಿ ಕ್ಷೇತ್ರದಲ್ಲಿ ನಮ್ಮದೇ ಆದ ಸಂಘಟನಾ ಶಕ್ತಿ ವೃದ್ದಿಸುತ್ತಿದ್ದೇವೆ. ಎಂದು ತಿಳಿಸಿದ್ದಾರೆ. ಯಮಕನಮರಡಿ ಕ್ಷೇತ್ರದಿಂದ ತಮ್ಮ ಪುತ್ರ ರಾಹುಲ್ ಸ್ಪರ್ಧೆ ವಿಚಾರದ ಬಗ್ಗೆ ತೀರ್ಮಾನವಾಗಿಲ್ಲ. ಯಮಕನಮರಡಿ ಮತ್ತು ಸವದತ್ತಿ ಕ್ಷೇತ್ರಗಳಲ್ಲದೆ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 12 ಕಡೆ ಗೆದ್ದರೆ ಸರ್ಕಾರ ರಚನೆಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

 

[t4b-ticker]

You May Also Like

More From Author

+ There are no comments

Add yours