ಸಂಸದ ಎ.ನಾರಾಯಣಸ್ವಾಮಿ ಡಿಸಿಎಂ ಡಿಕೆಶಿ ಭೇಟಿ ಮಾಡಿದ್ದೇಕೆ?

 

ಬೆಂಗಳೂರು:ಇಂದು ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ   ಉಪಮುಖ್ಯಮಂತ್ರಿ  ಹಾಗೂ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರನ್ನು ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅವರು  ಕುಮಾರ ಕೃಪಾದಲ್ಲಿ ಭೇಟಿ ಮಾಡಿ  ಚರ್ಚಿಸಿದರು.

ಭದ್ರ ಮೇಲ್ದಂಡೆ ಕಾಮಗಾರಿಯ ಸ್ಥಳಗಳಾದ   ತರೀಕೆರೆ ಹತ್ತಿರದ ವೈ ಜಂಕ್ಷನ್, ಅಬ್ಬಿನಹೊಳಲು ಹತ್ತಿರ ನಡೆಯುತ್ತಿವರು ಕಾಮಗಾರಿಗಳಿಗೆ ಬಗ್ಗೆ ಚರ್ಚಿಸಿದರು. ಇದಕ್ಕೆ ಸಂಭಂದಿಸಿದಂತೆ ತರೀಕೆರೆ ಶಾಸಕ ಶ್ರೀನಿವಾಸ್ ರವರಿಗೆ ಉಪಮುಖ್ಯಮಂತ್ರಿ  ಡಿ. ಕೆ.ಶಿವಕುಮಾರ್  ಕರೆ ಮಾಡಿ  ಕೇಂದ್ರ ಸಚಿವ ನಾರಾಯಣಸ್ವಾಮಿ ಅವರ  ಸಹಕಾರದೊಂದಿಗೆ ಅಬ್ಬಿನಹೊಳಲು ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವ ಜವಾಬ್ದಾರಿವಹಿಸಿ ಕಾಮಗಾರಿಯ ಪ್ರಗತಿಯ ಮಾಹಿತಿ ನೀಡಬೇಕು ಎಂದು ಡಿಕೆಶಿ ಅವರು ಶಾಸಕರಿಗೆ  ಸೂಚಿಸಿದರು, ಪಾವಗಡ ತಾಲ್ಲೂಕಿನ ಕುಡಿಯುವ ನೀರು ಹಾಗೂ ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಯ ಸಪೋರ್ಟ್ ಫಾರ್ ಇರಿಗೇಷನ್ ಮಾಡ್ರನೈಸೇಷನ್ ಪ್ರೋಗ್ರಾಮ್(SSIMP) ಯೋಜನೆ ಅಡಿಯಲ್ಲಿ ಜಿಲ್ಲೆಯ ವಾಣಿ ವಿಲಾಸ ಸಾಗರ ಜಲಾಶಯದ ಅಣೆಕಟ್ಟು ಅಭಿವೃದ್ಧಿಗೆ 720 ಕೋಟಿ ಹಣ ಬಿಡುಗಡೆಯಾಗಿದ್ದು ಅದನ್ನು ತ್ವರಿತ ಗತಿಯಲ್ಲಿ ಮುಗಿಸಲು  ಡಿ ಕೆಶಿ ಬಳಿ  ಸಹಕಾರ ನೀಡುವಂತೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.ಈ ಸಂದರ್ಭದಲ್ಲಿ  ವಿಜೆಎನ್.ಎಲ್ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ  ಉಪಸ್ಥಿತರಿದ್ದರು .

[t4b-ticker]

You May Also Like

More From Author

+ There are no comments

Add yours