ಸರ್ವೇ ಇಲಾಖೆಯ ಆಯುಕ್ತರಾಗಿ ಸರ್ವೆ ಇಲಾಖೆಯ ಹೆಚ್ಚುವರಿ ನಿರ್ದೇಶಕರಾಗಿದ್ದ ಸಿ.ಎನ್. ಶ್ರೀಧರ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಹೆಚ್.ವಿ. ದರ್ಶನ್ ಅವರನ್ನು ತುಮಕೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಈ ಇಬ್ಬರು ಅಧಿಕಾರಿಗಳ ಜಟಾಪಟಿ ಸರ್ಕಾರಕ್ಕೆ ಮುಜುಗರ ತಂದಿತ್ತು. ಈ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೋಟಿಸ್ ಜಾರಿ ಮಾಡಿ ಹದ್ದು ಮೀರಿ ವರ್ತಿಸದಂತೆ ಖಡಕ್ ಸೂಚನೆಯನ್ನು ನೀಡಲಾಗಿದೆ.
ಯಾವುದೇ ಅಧಿಕಾರಿಗಳು ಬಹಿರಂಗವಾಗಿ ಒಬ್ಬರ ವಿರುದ್ಧ ಒಬ್ಬರು ಆರೋಪ ಮಾಡುವುದು ಸೇವಾ ನಿಯಮಗಳ ಉಲ್ಲಂಘನೆಯಾಗುತ್ತದೆ. ಯಾವುದೇ ಕಾರಣಕ್ಕೂ ಬಹಿರಂಗವಾಗಿ ಹೇಳಿಕೆ ನೀಡಬಾರದು. ನೀಡಿದರೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೋಟಿಸ್ನಲ್ಲಿ ನೀಡಲಾಗಿದೆ.
ಅಧಿಕಾರಿಗಳು ಆರೋಪ ಮಾಡಲು ಸೂಕ್ತ ವೇದಿಕೆ ಇರುವಾಗ ಅದು ಬಿಟ್ಟು ಮಾಧ್ಯಮಗಳ ಮುಂದೆ ಹೋಗಿರುವುದು ಸರಿಯಲ್ಲ. ನಿಮ್ಮ ಆರೋಪಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಮಾಡಬಹುದು. ಇನ್ನು ಮುಂದೆ ಮಾಧ್ಯಮಗಳ ಮುಂದೆ ಹೋಗಬೇಡಿ ಎಂದು ನೋಟಿಸ್ ಜಾರಿ ಮಾಡಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ನೋಟಿಸ್ನಲ್ಲಿ ಹೇಳಿದ್ದಾರೆ.ನಿನ್ನೆ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲೂ ಈ ಇಬ್ಬರು ಅಧಿಕಾರಿಗಳ ಜಟಾಪಟಿ ವಿಚಾರ ಪ್ರಸ್ತಾಪವಾಗಿ ಇಬ್ಬರನ್ನು ವರ್ಗಾಯಿಸುವಂತೆ ಕೆಲ ಸಚಿವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದರು.ಮುಖ್ಯಮಂತ್ರಿಗಳು ಸಹ ಈ ಇಬ್ಬರು ಅಧಿಕಾರಿಗಳ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ವರ್ಗಾವಣೆ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದ ಬೆನ್ನಲ್ಲೆ ಈ ಇಬ್ಬರು ಅಧಿಕಾರಿಗಳ ವರ್ಗಾವಣೆ ಆದೇಶ ಹೊರ ಬಿದ್ದಿದೆ.ಈ ಇಬ್ಬರು ಅಧಿಕಾರಿಗಳು ನಿನ್ನೆ ಮುಖ್ಯ ಕಾರ್ಯದರ್ಶಿಗಳಿಗೆ ದೂರು-ಪ್ರತಿದೂರು ಸಲ್ಲಿಸಿದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮಾಧ್ಯಮಗಳ ಮುಂದೆ ಮಾತನಾಡದಂತೆ ಅಧಿಕಾರಿಗಳಾದ ರೂಪಾ ಮತ್ತು ಸಿಂಧೂರಿ ಅವರಿಗೆ ಸೂಚಿಸಿದ್ದರು.
+ There are no comments
Add yours