ಬೆಂಗಳೂರು,ಡಿ.18-ಯುವಕನೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೊಡ್ಡಬಿದರಕಲ್ಲುವಿನ ಸಿದ್ಧಾರ್ಥನಗರದ
ತುಮಕೂರು ಮೂಲದ ಮೋಹನ್ (29) ಆತ್ಮಹತ್ಯೆ ಮಾಡಿಕೊಂಡವರು.
ಜಾಲಹಳ್ಳಿ ಕ್ರಾಸ್ ಬಳಿ ಗಾರ್ಮೆಂಟ್ಸ್ ಔಟ್ ಲೇಟ್ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಕಳೆದ 3-4 ವರ್ಷದಿಂದ ಸಿದ್ದಾರ್ಥ ನಗರದಲ್ಲಿ ವಾಸವಿದ್ದರು.
ಜೀವನದಲ್ಲಿ ಜಿಗುಪ್ಸೆ ಉಂಟಾದ ಹಿನ್ನೆಲೆಯಲ್ಲಿ ಮೋಹನ್ ಇಂದು ತನ್ನ ಸಾವಿಗೆ ತಾನೇ ಕಾರಣವೆಂದು ಡೆತ್ನೋಟ್ ಬರೆದಿಟ್ಟು ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳದಲ್ಲಿ ತರಕಾರಿ ಕತ್ತರಿಸುವ ಚಾಕು ಮತ್ತು ಡೆತ್ ನೋಟ್ ಪತ್ತೆಯಾಗಿದೆ. ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
[t4b-ticker]
+ There are no comments
Add yours