ಹಿರಿಯೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಿರಿಯೂರು ಶಾಖೆ ವತಿಯಿಂದ ನಿನ್ನೆ ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ತಹಶೀಲ್ದಾರರಾದ ಡಾಕ್ಟರ್ ಪ್ರದೀಪ್ ಕುಮಾರ್ ಹಿರೇಮಠ ಇವರ ಮೇಲೆ ದೌರ್ಜನ್ಯ ನಡೆಸಿದ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಹಾಗೂ ಮುಂಬರುವ ದಿನಗಳಲ್ಲಿ ಸರ್ಕಾರಿ ನೌಕರರು ಧೈರ್ಯದಿಂದ ಹಾಗೂ ನಿರ್ಭೀತಿಯಿಂದ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಸೂಕ್ತ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಿರಿಯೂರು ಶಾಖೆಯ ಅಧ್ಯಕ್ಷರಾದ ಶಿವಕುಮಾರ್ ರವರು ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಧರ್ ಹಾಗೂ ಪದಾಧಿಕಾರಿಗಳು ಸಮಸ್ತ ಸರ್ಕಾರಿ ನೌಕರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರಮೇಶ್, ಸಹಕಾರ್ಯದರ್ಶಿ ಶ್ರೀನಿವಾಸ್ ,ಸಂಘಟನಾ ಕಾರ್ಯದರ್ಶಿ ವಿದ್ಯಾದರ್, ಕೆಎಂ ಉಪಾಧ್ಯಕ್ಷರಾದ ಕೆಂಪಣ್ಣ, ಕೋಶಾಧ್ಯಕ್ಷರಾದ ಕೃಷ್ಣಮೂರ್ತಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶ್ರೀಧರ್, ಮಧುಸೂದನ್ ,ಹನುಮಂತ್ ರೆಡ್ಡಿ ,ಇಮಾಂಸಾಬ್ ಹಾಗೂ ಕಂದಾಯ ಇಲಾಖೆ ಭೂಮಾಪನ ಇಲಾಖೆಯ ಉಪಖಜಾನೆ ಎಲ್ಲಾ ನೌಕರರು ಹಾಜರಿದ್ದರು.
[t4b-ticker]
+ There are no comments
Add yours