ಚಳ್ಳಕೆರೆ: ಚಳ್ಳಕೆರೆ ವಿಧಾನಸಬಾ ಕ್ಷೇತ್ರದ ಶಾಸಕರಾದ ಟಿ. ರಘುಮೂರ್ತಿರವರು ಚಳ್ಳಕೆರೆ ನಗರದ ತಾಲೂಕು ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ ಪ್ರಕಾಶ ಸ್ಪಾಂಜ ಅಂಡ್ ಐರನ್ ಕಂಪನಿಯವರು 78 ಆಕ್ಸಿಜನ್ ಬೆಡ್ ಮತ್ತು 5 ಐಸಿಯು ಬೆಡ್ ಗಳನ್ನು ನಿರ್ಮಾಣ ಮಾಡಲು ಒಪ್ಪಿಕೊಂಡು ಶಾಸಕರಿಂದ ಕಡತವನ್ನು ಪಡೆದುಕೊಂಡರು.
ಈ ಸಮಯದಲ್ಲಿ ಪ್ರಕಾಶ್ ಸ್ಪಾಂಜ್ ಅಂಡ್ ಐರನ್ ಕಂಪನಿ ರುದ್ರಪ್ಪ ತಹಶೀಲ್ದಾರ ಮಲ್ಲಿಕಾರ್ಜುನ್, ಟಿಎಚ್ಒ ಪ್ರೇಮ ಸುಧಾ ಮುಖ್ಯ ವೈದ್ಯಾಧಿಕಾರಿಗಳಾದ ವೆಂಕಟೇಶ್ ನಗರಸಭ ಅಧ್ಯಕ್ಷರಾದ ಜಯಲಕ್ಷ್ಮಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಹಾಜರಿದ್ದರು.
ಕೋವಿಡ್ ಕೇರ್ ಸೆಂಟರ್: ಚಳ್ಳಕೆರೆ ವಿಧಾನಸಬಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿರವರು ಶನಿವಾರ ಚಳ್ಳಕೆರೆ ನಗರದ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ಪರಿಶೀಲನೆ ನಡೆಸಿದರು ಈ ಸಮಯದಲ್ಲಿ ಆಯುಷ್ ಇಲಾಖೆ ವತಿಯಿಂದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಕಿಟ್ ವಿತರಣೆ ಮಾಡಿದರು.
ಈ ಸಮಯದಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ್, ಟಿಎಚ್ಒ ಪ್ರೇಮ ಸುಧಾ ನಗರಸಭ ಅಧ್ಯಕ್ಷರಾದ ಜಯಲಕ್ಷ್ಮಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಡಾ.ಕಲ್ಪನಾ ಹಾಜರಿದ್ದರು.
[t4b-ticker]
+ There are no comments
Add yours