ಚಿತ್ರದುರ್ಗ,ಜನವರಿ10:
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಈ ಹಿಂದಿನ ಸಾಲಿನ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಗಂಗಾಕಲ್ಯಾಣ ಯೋಜನೆಯಲ್ಲಿ ಸರ್ಕಾರಿ ವಿಚೇಚನಾ ಕೋಟಾದಡಿ ಆಯ್ಕೆಯಾದ ಹಿಂದುಳಿದ ವರ್ಗಗಳ ಫಲಾನುಭವಿಗಳು ಸೂಕ್ತ ದಾಖಲಾತಿಗಳನ್ನು 15 ದಿನಗಳ ಒಳಗಾಗಿ ಸಲ್ಲಿಸುವುದು.
ಚಿತ್ರದುರ್ಗ ನಗರದ ಜೆಸಿಆರ್ ಬಡಾವಣೆಯ 2ನೇ ಅಡ್ಡರಸ್ತೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿದಲ್ಲಿ ಕೊಳವೆ ಬಾವಿ ಕೊರೆಸಲು ಕ್ರಮವಹಿಸಲಾಗುವುದು.
ನಿಗಧಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.
======
[t4b-ticker]
+ There are no comments
Add yours