ಚಿತ್ರದುರ್ಗ,ಏಪ್ರಿಲ್ 08:
ಜನಾರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಂಡಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿಯಲ್ಲಿ ಯುವ ಸ್ಪಂದನ ಕಾರ್ಯಕ್ರಮದ ಯುವ ಪರಿವರ್ತಕರ ತರಬೇತಿಗಾಗಿ ಯುವತಿ, ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 22 ಅರ್ಜಿ ಸಲ್ಲಿಸಲು ಕೊನೆಯ ದಿನ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಮೇಲ್ಪಟ್ಟವರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. 21 ರಿಂದ 35 ವರ್ಷದೊಳಗಿರಬೇಕು. ಸ್ಥಳೀಯ ಭಾಷೆ ಕನ್ನಡವನ್ನು ಸ್ವಚ್ಛವಾಗಿ ಮಾತನಾಡಲು ಬರಬೇಕು. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ, ಹುಮ್ಮಸ್ಸು, ಹಾಗೂ ಉತ್ತಮ ಅಂತರ್ವ್ಯಕ್ತಿಯ ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿ ವಾಸಿಸುತ್ತಿರುವ ಖಾಯಂ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಚಿತ್ರದುರ್ಗ, ಹಿರಿಯೂರು, ಚಳ್ಳಕರೆ ತಾಲ್ಲೂಕಿನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಭಾವಚಿತ್ರದ ಸ್ವ ವಿವರದೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಚಿತ್ರದುರ್ಗ ಕಚೇರಿಗೆ ಏಪ್ರಿಲ್ 22ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-235636, 7760374733, 7832009669ಗೆ ಸಂಪರ್ಕಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
[t4b-ticker]
+ There are no comments
Add yours