ದೇಶದ ಕಾರ್ಮಿಕ ವರ್ಗ ತುಂಬಾ ಶ್ರಮದಿಂದ ಕೂಡಿದೆ:ಮಾಜಿ ಸಚಿವ ಡಿ.ಸುಧಕಾರ್

 

 

 

 

ಹಿರಿಯೂರು.ಮೇ.1- ಕಾರ್ಮಿಕರು ಶ್ರಮಜೀವಿಗಳು ಎಂದು ಮಾಜಿ ಸಚಿವರಾದ ಡಿ. ಸುಧಾಕರ್ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ವತಿಯಿಂದ ನಡೆದ ಮೇ 1 ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ಶ್ರಮಿಕರ ಸಮ್ಮೇಳವನ್ನು ಮತ್ತು ಹಿರಿಯ ಕಾರ್ಮಿಕರಿಗೆ ಸನ್ಮಾನ ಸಮಾರಂಭ, ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಮ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರಮಿಕ ವರ್ಗದವರಾದ ಕಾರ್ಮಿಕರಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರು ನಮ್ಮೆಲ್ಲರಿಗೂ ದಾರಿ ದೀಪವಾಗಿದ್ದಾರೆ ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

 

 

ಕೆ ಪಿ ಸಿ ಸಿ ಸದಸ್ಯರಾದ ಅಮೃತೇಶ್ವರಸ್ವಾಮಿ, ಕಂದಿಕೆರೆ ಸುರೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಖಾದಿ ರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರಲಿಂಗೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಗೀತಾ ನಾಗ ಕುಮಾರ್ ಜ್ಞಾನೇಶ್ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ ಜಿ.ಎಲ್ ಮೂರ್ತಿ,ನಗರ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶಿವಕುಮಾರ್ ವಿ. ಗ್ರಾಮಾಂತರ ಅಧ್ಯಕ್ಷರಾದ ಅಮಾನುಲ್ಲಾ ಉಪಾಧ್ಯಕ್ಷರುಗಳಾದ ಮಾರುತಿ ರಾವ್, ಬಸವರಾಜ್ ಡಿಶ್, ಶ್ರೀನಿವಾಸ್ ದುರ್ಗೆಶ್ ಹರೀಶ್,ಜ್ಞಾನೇಶ, ರಂಗನಾಥ್ ತಿಮ್ಮಯ್ಯ ,ರಂಗನಾಥ್ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಿರಿಯ ಕಾರ್ಮಿಕ ಬಂಧುಗಳಿಗೆ ಸನ್ಮಾನಿಸಲಾಯಿತು.

[t4b-ticker]

You May Also Like

More From Author

+ There are no comments

Add yours