ಚಿತ್ರದುರ್ಗ,ಜೂನ್29:
ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಜೂನ್30ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 10ಕ್ಕೆ ಬಳ್ಳಾರಿಯಿಂದ ಹೊರಟು ಮಧ್ಯಾಹ್ನ 12ಕ್ಕೆ ಮೊಳಕಾಲ್ಮುರಿಗೆ ಆಗಮಿಸಿ, ಮೊಳಕಾಲ್ಮುರಿನ ರೇಖಲಗೆರೆ ತಾಂಡದಲ್ಲಿ ಶ್ರೀ ದೇನಾಭಗತ್ ಸೇವಾ ಟ್ರಸ್ಟ್ ರಾಜಯೋಗ ವಿದ್ಯಾಶ್ರಮ ವತಿಯಿಂದ ಕೋಟಿ ವೃಕ್ಷ ಸಂವರ್ಧನಾ ಅಭಿಯಾನದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30ಕ್ಕೆ ನಾಯಕನಹಟ್ಟಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸುವರು. ಮಧ್ಯಾಹ್ನ 2ಕ್ಕೆ ನಾಯಕನಹಟ್ಟಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ನಿಗಮಗಳ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 2020-21ನೇ ಸಾಲಿನ ಸಹಾಯಧನ ಹಾಗೂ ಸಾಲಸೌಲಭ್ಯದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4ಕ್ಕೆ ನಾಯಕನಹಟ್ಟಿಯಲ್ಲಿ ಜಲಶುದ್ಧೀಕರಣ ಘಟಕದ ಕಟ್ಟಡ ಉದ್ಘಾಟನೆ ಮಾಡುವರು. ಸಂಜೆ 5ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======
[t4b-ticker]
+ There are no comments
Add yours