ಲಿಂಗಾಯತರು ಬಿಜೆಪಿ ಆಸ್ತಿಯಲ್ಲ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

 

 

 

 

ಕಲಬುರ್ಗಿ: ಬಿಜೆಪಿಯವರು ಲಿಂಗಾಯತರನ್ನು ತಮ್ಮ ಆಸ್ತಿ ‌ಎಂದು ತಿಳಿದುಕೊಂಡಿದ್ದಾರೆ. ಆದರೆ ಅವರು  ಬಿಜೆಪಿ  ಆಸ್ತಿಯಲ್ಲ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

 

 

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣಕ್ಕೆ ತೆರಳಲು   ‌ವಿಮಾನ ನಿಲ್ದಾಣಕ್ಕೆ ಬಂದಿದ್ದ ಡಿಕೆಶಿ ಲಿಂಗಾಯತರಲ್ಲೂ ಸಾಕಷ್ಟು ಜನರು ಕಾಂಗ್ರೆಸ್ ಬೆಂಬಲಿಗರಿದ್ದಾರೆ. ಲಿಂಗಾಯತ ಮುಖಂಡರಾದ ಎಂ.ಬಿ. ಪಾಟೀಲ, ಎಸ್.ಆರ್. ಪಾಟೀಲ, ಈಶ್ವರ ಖಂಡ್ರೆ ಅವರು ‌ಕಾಂಗ್ರೆಸ್ ನಾಯಕರಿದ್ದಾರೆ ಎಂದರು.

ಮುಖ್ಯಮಂತ್ರಿ ಹುದ್ದೆಗಾಗಿ‌ ಕಾಂಗ್ರೆಸ್ ನಲ್ಲಿ ಮ್ಯೂಸಿಕಲ್ ಚೇರ್ ಆಟ ಆಡುತ್ತಿದ್ದಾರೆ  ಎಂಬ ಬಿಜೆಪಿ ಅಧ್ಯಕ್ಷ ‌ನಳಿನ್ ಕುಮಾರ್ ಅವರಿಗೆ ‌ತಿರುಗೇಟು ನೀಡಿದ ಅವರು ಬಿಜೆಪಿಯಲ್ಲೇ ಮ್ಯೂಸಿಕಲ್ ‌ಚೇರ್ ಆಟ ಜೋರಾಗಿ ನಡೆಯುತ್ತಿದೆ ಎಂದು ಹರಿಹಾಯ್ದರು.

[t4b-ticker]

You May Also Like

More From Author

+ There are no comments

Add yours