ಚಿತ್ರದುರ್ಗ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದೆ.
ದಾವಣಗೆರೆ- ಚಿತ್ರದುರ್ಗ ನಮ್ಮ ಪಕ್ಷದ ಅಭ್ಯರ್ಥಿ ನವೀನ್ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ನಗರಸಭೆ ಆವರಣದಲ್ಲಿ ಮತ ಚಲಾಯಿಸಿ ಮಾಧ್ಯಮದವರೊಂದಿಗೆ ಮಾತನಾಡಿ
ಕಳೆದ 10 ದಿನ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇವೆ.
8 ಮಂದಿ ಶಾಸಕರು 2 ಸಂಸದರು ನಾವು ಇದ್ದೇವೆ.
ಈ ಚುನಾವಣೆಯಲ್ಲಿ ಜನರ ಪ್ರೀತಿ ನೋಡಿದ್ದೇನೆ.
ನಮ್ಮ ಪಕ್ಷದಲ್ಲಿ ಯಾವುದೇ ಶಾಸಕರು ಅಪಸ್ವರ ಎತ್ತಿಲ್ಲ.
ನನಗಿಂತ ಮುತುವರ್ಜಿಯಿಂದ ನಮ್ಮ ಶಾಸಕರು ಕೆಲಸ ಮಾಡಿದ್ದಾರೆ ಹಾಗಾಗಿ ಗೆಲುವು ನಮ್ಮದೇ ಎಂದು ತಿಳಿಸಿದರು.
[t4b-ticker]
+ There are no comments
Add yours