ಹಿರಿಯೂರು:ಸರ್ಕಾರಿ ಕಾರ್ಯಕ್ರಮದಲ್ಲಿ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಬಾಗವಹಿಸಿದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಹಿರಿಯೂರು ಹೊರವಲಯದ ದಿಂಡಾವರ ರಸ್ತೆಯ ಆದಿವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 25 ಕೋಟಿ ರೂ. ವೆಚ್ಚದ ಮಲ್ಟಿ ಸ್ಪೆಷಾಲಿಟಿ ತಾಲ್ಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆಯಾಗಿದೆ. ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಲ್ಲದೇ ಯಾವುದೇ ಅಧಿಕೃತ ಜನಪ್ರತಿನಿಧಿ ಅಥವಾ ಸರ್ಕಾರದ ಸ್ಥಾನಮಾನವಿಲ್ಲದೆ ಕ್ಯಾಬಿನೆಟ್ ಸಚಿವರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣವನ್ನು ಶಾಸಕಿ ಅವರ ಪತಿ ಶ್ರೀನಿವಾಸ್ ಮಾಡಿದ್ದು ಸಭಿಕರಲ್ಲಿ ಉಬ್ಬೇರುವಂತೆ ಮಾಡಿದೆ. ಇದಕ್ಕೆ ಜಿಲ್ಲಾಡಳಿತ ಯಾವ ರೀತಿ ಉತ್ತರ ನೀಡಲಿದೆ ಎಂಬುದು ಕಾದು ನೋಡಬೇಕಿದೆ.
[t4b-ticker]
+ There are no comments
Add yours