ಹೊಳಲ್ಕೆರೆ : ೨೦೨೨ ನೇ ಸಾಲಿನ ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಹೊಳಲ್ಕೆರೆ ವಕೀಲರಾದ ಎಸ್.ವೇದಮೂರ್ತಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರು ಕರ್ನಾಟಕ ರಾಜ್ಯ ಯುವ ಒಕ್ಕೂಟ ರಾಜ್ಯಧ್ಯಕ್ಷರಾದ ಡಾ.ಎಸ್.ಬಾಲಾಜಿ ತಿಳಿಸಿದ್ದಾರೆ.
ಸಾಮಾಜಿಕ ಕಾಳಜಿ ಮತ್ತು ಕಾನೂನು ಕ್ಷೇತ್ರದ ನಿಸ್ಥಾರ್ಥ ಸೇವೆಯನ್ನು ಪರಿಗಣಿಸಿ ೨೦೨೨ ನೇ ಸಾಲಿನ ಸಾಲಿನ ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿ ನೀಡಿರುವ ಬೆಂಗಳೂರು ಕರ್ನಾಟಕ ರಾಜ್ಯ ಯುವ ಒಕ್ಕೂಟವು ಫೆ ೧ರಂದು ವಿಜಯಪುರ ಜಿಲ್ಲಾ ಮತ್ತು ಮುದ್ದೇಬಿಹಾಳ್ ತಾಲೂಕು ಘಟಕ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸ್ವಾಮಿ ವಿವೇಕಾನಂದ ಜಯಂತೋತ್ಸವ, ರಾಜ್ಯ ಯುವ ಸಮ್ಮೇಳನ ಮತ್ತು ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸಾಂಸ್ಕೃತಿ ಯುವ ವೈಭವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ರಾಜ್ಯಾಧ್ಯಕ್ಷರಾದ ಡಾ.ಬಾಲಾಜಿ ತಿಳಿಸಿದ್ದಾರೆ.
[t4b-ticker]
+ There are no comments
Add yours