ಚಿತ್ರದುರ್ಗ, ಏಪ್ರಿಲ್ 08:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಸಬಾ ಹೋಬಳಿ ದೇವರಮರಿಕುಂಟೆ-1, ದೇವರಮರಿಕುಂಟೆ-2, ರಂಗವ್ವನಹಳ್ಳಿ ಮತ್ತು ತಳಕು ಹೋಬಳಿ ಮನ್ನೆಕೋಟೆ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ-1 ಕೇಂದ್ರಸ್ಥಾನದಲ್ಲಿ ಒಟ್ಟು 579 ಪಡಿತರ ಚೀಟಿಗಳು, ದೇವರಮರಿಕುಂಟೆ-2 ಕೇಂದ್ರ ಸ್ಥಾನದಲ್ಲಿ 567 ಪಡಿತರ ಚೀಟಿಗಳು, ರಂಗವ್ವನಹಳ್ಳಿ ಕೇಂದ್ರಸ್ಥಾನದಲ್ಲಿ 537 ಪಡಿತರ ಚೀಟಿಗಳಿವೆ, ಮನ್ನೆಕೋಟೆ ಕೇಂದ್ರಸ್ಥಾನದಲ್ಲಿ 575 ಪಡಿತರ ಚೀಟಿಗಳಿವೆ.
ನ್ಯಾಯಬೆಲೆ ಅಂಗಡಿ ಕೋರಿ ಅರ್ಜಿ ಸಲ್ಲಿಸುವ ಸಂಸ್ಥೆಗಳು, ಇತರೆಯವರು ಅರ್ಜಿ ಜೊತೆಗೆ ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸಗಳೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಿಲ್ಲಾಧಿಕಾರಿಗಳ ಕಚೇರಿ ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ದಿನಾಂಕದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಚಳ್ಳಕೆರೆ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ತಿಳಿಸಿದ್ದಾರೆ.
[t4b-ticker]
+ There are no comments
Add yours